09/06/2025 12:36 AM

Translate Language

Home » ಲೈವ್ ನ್ಯೂಸ್ » ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ:

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ:

Facebook
X
WhatsApp
Telegram


ರೈತಬಾಂಧವರಿಂದ ತಾಳೆಯಾಗದೆ ಇರುವ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ್.


ಬೀದರ.05.ಮಾರ್ಚ.25: – ಕರ್ನಾಟಕರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾಯೋಜನೆ (ಏಖS-Pಒಈಃಙ) ಅಡಿಯ 2023-24 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೊಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ.

ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಸಂರಕ್ಷಣೆ ತಂತ್ರಾಶದಲ್ಲಿ ಪರಿಶೀಲಿಸಲಾಗಿ ಮುಂಗಾರು ಹಂಗಾಮಿನಲ್ಲಿ ತಿರಸ್ಕ್ರತಗೊಂಡ ಜಿಲ್ಲೆಯ ಒಟ್ಟು 8106, ಹಿಂಗಾರು ಹಂಗಾಮಿನಲ್ಲಿ ತಿರಸ್ಕ್ರತಗೊಂಡ 947  ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯತಗಳಲ್ಲಿ  ಪ್ರದರ್ಶಿಸಲಾಗುವುದು,
ಕಾರಣ ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಮಾತ್ರ ಮಾಹಿತಿಯನ್ನು ಪ್ರಕಟಿಸಿದ ದಿನಾಂಕದಿಂದ 10 ದಿನಗಳ ಒಳಗಾಗಿ ತಮ್ಮ ಮನವಿಯನ್ನು ಸಲ್ಲಿಸಲು ಹಾಗೂ ಮರುಪರಿಶೀಲಿಸಲು, ಸದರಿ ಮನವಿಯೊಂದಿಗೆ ಬೆಳೆ ವಿಮೆಗೆ ನೊಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ 2023-24ರ ಪಹಣಿ ಪತ್ರಿಕೆಯಲ್ಲಿ (ಖಖಿಅ) ವಿಮೆಗೆ ನೊಂದಾಯಿಸಿದ ಬೆಳೆ ನಮೂದಾಗಿರಬೇಕು, ಬೆಂಬಲ ಬೆಲೆ ಪ್ರಯೋಜನ ಪಡೆದಿದಲ್ಲಿ, ರಶೀದಿ ಸಲ್ಲಿಸುವುದು ಹಾಗೂ ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಂPಒಅ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ ಸಲ್ಲಿಸಬೇಕು.


ತಾಲ್ಲೂಕುವಾರು ವಿವರಗಳು,

ಬೀದರ ಮುಂಗಾರು 540, ಹಿಂಗಾರು 31; ಔರಾದ ಮುಂಗಾರು 1741, ಹಿಂಗಾರು 156;ಬಸವಕಲ್ಯಾಣಮುಂಗಾರು 437, ಹಿಂಗಾರು 75;ಹುಮನಾಬಾದ ಮುಂಗಾರು 567, ಹಿಂಗಾರು 6;ಹುಲಸೂರು ಮುಂಗಾರು 518, ಹಿಂಗಾರು 30;ಕಮಲನಗರ ಮುಂಗಾರು 920, ಹಿಂಗಾರು 461; ಚಿಟಗುಪ್ಪಾ ಮುಂಗಾರು 880, ಹಿಂಗಾರು 0 ಇದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!