====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಬೆಂಗಳೂರು.08.ಮಾರ್ಚ.25:-ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಈ ಸಾಲಿನ ಬಜೆಟ್ ನಲ್ಲಿಯೂ 5 ಸಾವಿರ ಕೋಟಿ ರೂ. ಯೋಜನೆ ರೂಪಿಸಲು ಅವಕಾಶ ನೀಡಲಾಗಿದ್ದು, ಇದು ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆಯನ್ನು ಸಾಬೀತು ಪಡೆಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5367 ಶಿಕ್ಷಕರ ಹುದ್ದೆಗಳ ಭರ್ತಿಯ ನಿರ್ಧಾರ ಶಾಲೆಗಳ ಶಿಕ್ಷಕರ ಕೊರತೆಯನ್ನು ನಿವಾರಿಸಲಿದ್ದರೆ, ತೊಗರಿಬೆಳೆಗೆ 450 ರೂ. ಹೆಚ್ಚುವರಿ ಪೆÇ್ರೀತ್ಸಾಹ ಧನ ಹೆಚ್ಚಳ ನಮ್ಮ ಭಾಗದ ರೈತರ ಪಾಲಿಗೆ ಆಶಾಕಿರಣವಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆ ಅಡಿ, ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕ ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆ ಬಲಪಡಿಸುವ ಮತ್ತು ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ ಆರಂಭಿಸುತ್ತಿರುವ ನಿರ್ಧಾರ ಸ್ವಾಗತಾರ್ಹ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================