ಬೆಂಗಳೂರು.08.ಮಾರ್ಚ.25:- ರಾಜ್ಯದ್ 2025-26 ನೇ ಬಜೆಟ್ ಅಧಿವೇಶನ ಗೆ ಸಂಬಂಧಿತ ವಿರೋಧ ಪಕ್ಷ ಟೀಕೆಗಳಿಗೆ ಮಾನ್ಯ ಸಚಿವ ಪ್ರಿಯಾಂಕ ಖರ್ಗೆ ಅವರು…. ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವು ನೀತಿಗಳು ಮತ್ತು ನಿರ್ಧಾರಗಳ ಕುರಿತು ಸರ್ಕಾರವನ್ನು ರಚನಾತ್ಮಕವಾಗಿ ಪ್ರಶ್ನಿಸುತ್ತವೆ.
ನಮ್ಮ ಸರ್ಕಾರದ ಬಜೆಟ್ ನಲ್ಲಿ ರಚನಾತ್ಮಕ ಟೀಕೆಗಳಿಗೆ ಅವಕಾಶವೇ ಇಲ್ಲದಿರುವಾಗ ರಾಜ್ಯದ ಬಿಜೆಪಿ ನಾಯಕರು ಹಲಾಲ್ ಬಜೆಟ್ ಎಂಬ ಟೊಳ್ಳು ಟೀಕೆಯ ಮೊರೆ ಹೋಗಿದ್ದಾರೆ. ಈ ಸ್ಟಿರಿಯೋಟೈಪ್ ಟೀಕೆಯ ಮೂಲಕ ಬಿಜೆಪಿಗರು ತಮ್ಮ ಬೌದ್ಧಿಕ ದಿವಾಳಿತನವನ್ನು ತಾವೇ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಮೌಲ್ಯಯುತ ರಾಜಕಾರಣಕ್ಕೆ ತಿಲಾಂಜಲಿ ಇಟ್ಟಿದ್ದಾರೆ.
ಬಜೆಟ್ ಬಗ್ಗೆ ಅರ್ಥಪೂರ್ಣ ಚರ್ಚೆ ಮಾಡಲು ಸಾಮರ್ಥ್ಯವಿಲ್ಲದ ಬಿಜೆಪಿಗೆ #HalalBudget ಕೊನೆಯ ಅಸ್ತ್ರವಾಗಿದೆ !
ಹಿಂದೆ ಹೀಗೆಯೇ ಹಲಾಲ್, ಜಟ್ಕಾ ಕಟ್ ಎಂಬ ವಿಭಜನಾತ್ಮಕ ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ, ಅಲ್ಲದೆ, ಬಿಜೆಪಿ ಪಕ್ಷವು ಬಣ ಬಡಿದಾಟದ ಹಲಾಲ್ ಕಟ್ ನಿಂದಾಗಿ ಹಲವು ತುಂಡುಗಳಾಗಿದೆ!
ಬಜೆಟ್ ಬಗ್ಗೆ ರಚನಾತ್ಮಕ ಟೀಕೆಗಳನ್ನು ಎದುರಿಸಲು ನಾವು ಸದಾ ಸಿದ್ದರಿದ್ದೇವೆ, ಚರ್ಚೆಗೆ ಮುಕ್ತವಾಗಿದ್ದೇವೆ, ಉತ್ತರಿಸಲು ತಯಾರಿದ್ದೇವೆ, ಆದರೆ @BJP4Karnataka ಚರ್ಚೆಗೆ ಸಿದ್ದವಿದೆಯೇ?
ಕರ್ನಾಟಕದ ಸಮಗ್ರ ಏಳಿಗೆಗೆ, ಆರ್ಥಿಕ ಸುಸ್ಥಿರತೆಗೆ, ಸಾಮಾಜಿಕ ಉನ್ನತಿಗೆ ನಮ್ಮ ಬಜೆಟ್ ಪೂರಕವಾಗಿರುವುದನ್ನು ಸಹಿಸದ ಬಿಜೆಪಿ ಸದಾ ಕನ್ನಡಿಗರನ್ನು ಅವಮಾನಿಸುವ ರಾಜಕಾರಣದಲ್ಲಿ ತೊಡಗಿರುವುದು ದುರಂತ.
ಅರ್ಥಪೂರ್ಣ ಹೊಣೆಗಾರಿಕೆ ಪ್ರದರ್ಶಿಸಬೇಕಾದ ವಿರೋಧ ಪಕ್ಷವು ನೈತಿಕ ಹಾಗೂ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದಾಗ ರಾಜಕೀಯ ವ್ಯವಸ್ಥೆ ಮಾತ್ರವಲ್ಲ ಸಾಮಾಜಿಕ ಸ್ವಾಸ್ಥ್ಯವೂ ಕೆಡುತ್ತದೆ.
