09/06/2025 10:07 PM

Translate Language

Home » ಲೈವ್ ನ್ಯೂಸ್ » *ಮಹಿಳೆಯರನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ.*

*ಮಹಿಳೆಯರನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ.*

Facebook
X
WhatsApp
Telegram

*
ಬೀದರ.08.ಮಾರ್ಚ.25:-ಮಹಿಳೆಯರನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.


ಅವರು ಶನಿವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಅವರ ಸಂಯುಕ್ತಾಶ್ರಯದಲ್ಲಿ ನಗರದ ಪ್ರತಾಪ ನಗರದ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಸಾಮಾಜಿಕ, ರಾಜಕೀಯ, ಆರ್ಥಿಕ ಮತ್ತು ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಸಾಧನೆಯನ್ನು ಗುರುತಿಸಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಮಾರ್ಚ್.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಮಹಿಳೆಯರ ಹಕ್ಕುಗಳು, ಸಮಾನತೆ ಮತ್ತು ಸಾಧನೆಗಳನ್ನು ತಿಳಿಸಲು 1975 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್.8 ನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಎಂದು ಘೋಷಿಸಿತು. ಹೆಣ್ಣನ್ನು ದೇವರು ಎಂದು ಪೂಜಿಸುವ ದೇಶ ನಮ್ಮದು. ನಮ್ಮ ದೇಶ ಕೂಡ ತಾಯಿ ರೂಪದಲ್ಲಿ ಕಾಣುತ್ತೆವೆ, ಅದಕ್ಕೆ ಭಾರತಮಾತೆ ಎಂದು ಕರೆಯುತ್ತೇವೆ. ನಮ್ಮ ದೇಶದಲ್ಲಿ ಹರಿಯುವ ನದಿಗಳಿಗೂ ಕೂಡ ಹೆಣ್ಣಿನ ಹೆಸರಿನಿಂದ ಕರೆಯುತ್ತೇವೆ. ಹೆಣ್ಣಿಗೆ ಉನ್ನತ ಸ್ಥಾನಮಾನ ನೀಡುವ ದೇಶ ನಮ್ಮದಾಗಿದೆ. ನಾನು ಕೂಡ ಶಾಸಕನಾಗಿ, ಸಚಿವನಾಗಿ ಮತ್ತು ರಾಜಕೀಯವಾಗಿ ಬೆಳೆಯಲು ನನ್ನ ತಾಯಿಯ ಕೊಡುಗೆ ದೊಡ್ಡದಾಗಿದೆಂದರು.


ನಮ್ಮ ಸರ್ಕಾರ ಈ ವರ್ಷ ಪಂಚ ಗ್ಯಾರಂಟಿಗಾಗಿ 51000 ಕೋಟಿ ರೂ. ನೀಡಲಾಗಿದೆ. ಮಹಿಳೆಯರನ್ನು ಆರ್ಥಿಕ ಸಬಲೀಕರಣವನ್ನು ಹೆಚ್ಚಿಸಲು ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಮಹಿಳೆಯರನ್ನು ಉಚಿತವಾಗಿ ಸಂಚಾರಿಸಲು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ.

ಮಹಿಳೆಯರನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಗಳಾಗಿ ಜೀವನ ನಡೆಸಲು ನಮ್ಮ ಸರ್ಕಾರ ಯೋಜನೆಗಳು ಮತ್ತು ಕಾರ್ಯಕ್ರಮಗಳು ಹಮ್ಮಿಕೊಂಡಿದೆ. ನಿನ್ನೆ ಮಂಡಿಸಿದ ಬಜೆಟ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗಿದೆ ಎಂದು ತಿಳಿಸಿದರು.


ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅವರು ಮಾತನಾಡಿ, ಜಗತ್ತಿನಲ್ಲಿ ಬಹುತೇಕ ವಿಚಾರಗಳಿಗೆ ಒಂದೊಂದು ದಿನ ಮೀಸಲಿಟ್ಟಿರುವಂತೆ ಮಹಿಳೆಯರಿಗೂ ಕೂಡ ಒಂದು ವಿಶೇಷ ದಿನವನ್ನು ನಿಗದಿಪಡಿಸಲಾಗಿದೆ. ಅದೇ ವಿಶ್ವದಾದ್ಯಂತ ಆಚರಣೆ ಮಾಡುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ. ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಿರುತ್ತದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ.

ವೈಯಕ್ತಿಕವಾಗಿ ಮನೆಯ ಅರ್ಧ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಇಂಜಿನಿಯರ್ ಆಗಿ, ಪೈಲೆಟ್ ಆಗಿ ಕೂಡ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾಳೆ.

ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ. ಹಾಗಾಗಿ ವಿಶ್ವದಾದ್ಯಂತ ಮಹಿಳೆಯರಿಗಾಗಿ ಗೌರವಾನ್ವಿತವಾಗಿ ಈ ಒಂದು ದಿನವನ್ನು “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಯನ್ನಾಗಿ ಆಚರಿಸುವ ಮೂಲಕ ಮೀಸಲಿಡಲಾಗಿದೆಂದರು.

ಸಮಾನತೆಯ ಜೊತೆಗೆ ಒಗ್ಗಟ್ಟಿನಲ್ಲಿ ಸಹ ಮಹಿಳೆಯರು ಸದಾ ಮುಂದಿರುವುದು ದೇಶದ ಆರ್ಥಿಕ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗಲಿದೆ. ಪ್ರತಿ ವರ್ಷ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳೆಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಮಹಿಳೆಯರ ಸಾಧನೆಗೆ ಮನಃಪೂರ್ವಕ ಗೌರವ ಸೂಚಿಸುವ ದಿನ ಇದಾಗಿದೆ.

ಕೇಂದ್ರ ಸರ್ಕಾರದಿಂದ ದೊರೆಯುವ ಸುಕನ್ಯಾ ಸಮೃದ್ಧಿ ಯೋಜನೆ, ಬೇಟಿ ಬಚಾವೋ ಬೇಟಿ ಬಚಾವೋ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತಂದು ದೇಶದ ಯುವತಿಯರಿಗೆ, ಮಹಿಳೆಯರಿಗೆ ಪೆÇ್ರೀತ್ಸಾಹಿಸಲಾಗುತ್ತಿದೆ ಎಲ್ಲರೂ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.


ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆಯಾಗಿರಬೇಕು, ಪ್ರತಿ ಹಂತದಲ್ಲೂ ಮಹಿಳೆ ಪುರುಷನμÉ್ಟೀ ಸಮಾನಳಾಗಿದ್ದಾಳೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆ ಮಾಡಿದ್ದಾರೆ ಎಂದು ಹೇಳಿದರು.


ಈ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲಾಯಿತು. ಅದೇ ರೀತಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಮತ್ತು ಹೊಸದಾಗಿ ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ನೇಮಕವಾಗಿರುವರಿಗೆ ನೇಮಕಾತಿ ಆಯ್ಕೆ ಪತ್ರವನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ ಎಮ್.ಎಚ್., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ ಸೇರಿದಂತೆ ವಿವಿಧ ಇಲಾಖೆಯ ಮಹಿಳಾ ಅಧಿಕಾರಿಗಳು ಉಪಸ್ಥಿತರಿದ್ದರು.
*****

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!