ಜೇವರ್ಗಿ.09.ಮಾರ್ಚ.25:- ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನಲ್ಲಿ ಇಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಮತ್ತು ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ‘ಕಲ್ಯಾಣ ಪಥ’ ಯೋಜನೆಗೆ ಚಾಲನೆ ನೀಡಲಾಯಿತು.
ಕಲ್ಯಾಣ ಪಥ ಯೋಜನೆಯು ಕಲ್ಯಾಣ ಕರ್ನಾಟಕ ಭಾಗದ 1,166 ಕಿ.ಮೀ ಗ್ರಾಮೀಣ ರಸ್ತೆಗಳನ್ನು ₹1,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ. ಇದರೊಂದಿಗೆ ಶೀಘ್ರದಲ್ಲಿಯೇ ‘ಪ್ರಗತಿಪಥ’ ಯೋಜನೆಯನ್ನು ಜಾರಿ ಮಾಡಲಾಗುವುದು.
ಗ್ರಾಮೀಣ ರಸ್ತೆಗಳ ಅಭಿವೃದ್ದಿಯಿಂದ ರೈತರು, ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರಿಗೂ ಅನುಕೂಲವಾಗಲಿದೆ.
