09/06/2025 10:06 PM

Translate Language

Home » ಲೈವ್ ನ್ಯೂಸ್ » ಮಾರ್ಚ.12ರಂದು ವಿಚಾರ ಸಂಕಿರಣ, ಉಪನ್ಯಾಸ
ಹಾಗೂ ಬೀದಿನಾಟಕ ಕಾರ್ಯಕ್ರಮ

ಮಾರ್ಚ.12ರಂದು ವಿಚಾರ ಸಂಕಿರಣ, ಉಪನ್ಯಾಸ
ಹಾಗೂ ಬೀದಿನಾಟಕ ಕಾರ್ಯಕ್ರಮ

Facebook
X
WhatsApp
Telegram

%ಬೀದರ.11.ಮಾರ್ಚ.25:-   ಕರ್ನಾಟಕ ರಾಜ್ಯ ಮದ್ಯಾಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಸರ್ಕಾರಿ ಇಂಜಿನಿಯರಿಂಗ ಮಹಾವಿದ್ಯಾಲಯ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ.12 ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರಿ ಇಂಜಿನಿಯರಿಂಗ ಮಹಾವಿದ್ಯಾಲಯ ಆವರಣ ಬೀದರದಲ್ಲಿ ವಿಚಾರ ಸಂಕಿರಣ, ಉಪನ್ಯಾಸ ಹಾಗೂ ಬೀದಿನಾಟಕ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬೀದರ ಅಬಕಾರಿ ಉಪ ಆಯುಕ್ತರಾದ ರವಿಶಂಕರ ಅವರು ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೀದರ ಸರ್ಕಾರಿ ಇಂಜಿನಿಯರಿಂಗ್ ಮಹಾವಿದ್ಯಾಲಯದ ಪ್ರಾಚಾರ್ಯರು ಡಾ.ದೇವೇಂದ್ರ ಹಂಚೆ, ಮುಖ್ಯ ಅತಿಥಿಗಳಾಗಿ ಬೀದರ ಜಿಲ್ಲಾ ಕನ್ನಡ ಸಹಿತ್ಯ ಪರಿಷತ್ತನ ಕೋಶಾಧ್ಯಕ್ಷರಾದ ಶಿವಶಂಕರ ಟೋಕರೆ, ಬೀದರ ನ್ಯೂಟೌನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವಿಜಯಕುಮಾರ ಬಾವಗೆ, ಬೀದರ ವಚನ ಚಾರಿಟೇಬಲ್ ಸೊಸೈಟಿ ನಿರ್ದೇಶಕರಾದ ಲಿಂಗಾರತಿ ಅಲ್ಲಮಪ್ರಭು ನಾವದಗೇರೆ ಹಾಗೂ ಕಾರ್ಯಕ್ರಮದಲ್ಲಿ ಬೀದರ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಸಂಗಪ್ಪ ಕಾಂಬಳೆ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!