ಬೀದರ.12.ಮಾರ್ಚ.25- ಇಂದು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಪ್ರಭು ಚೌಹಾಣ್ ಅವರು ಈ ಕುರಿತು ಸರ್ಕಾರದ ಗಮನಕ್ಕೆ ತಂದಿದ್ದಾರೆ. ರಸ್ತೆ ಕಾಮಗಾರಿ ಪೂರ್ಣ ಆಗಿ ಇನ್ನೂ ಎರಡು ತಿಂಗಳ ಆಗಿಲ್ಲ.
ಆಗಲೇ ರಸ್ತೆ ಅಲ್ಲಲ್ಲಿ ಬಿರುಕು ಬಿಡುತ್ತಿದೆ. ರಸ್ತೆ ಸಮತಟ್ಟು ಆಗಿಲ್ಲದ ಕಾರಣ ಸಂಚರಿಸುವಾಗ ಪ್ರಯಾಣಿಕರಿಗೆ ಉಬ್ಬು-ತಗ್ಗುಗಳ ಅನುಭವ ಆಗುತ್ತಿದೆ. ರಸ್ತೆ ನಿಯಾಮಾನುಸಾರ ಕಾಮಗಾರಿ ಆಗದೇ ಇರುವುದರಿಂದ ಆಗಾಗ ಅಪಘಾತಗಳು ಸಂಭವಿಸುತ್ತಿವೆ.
ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ತಾವು ಖುದ್ದಾಗಿ ಬಂದು ಈ ರಸ್ತೆ ಕಾಮಗಾರಿ ವೀಕ್ಷಣೆ ಮಾಡುವಂತೆ ಶಾಸಕರು ಲೋಕೋಪಯೋಗಿ ಸಚಿವರಲ್ಲಿ ಮನವಿ ಮಾಡಿದರು.
ಬೀದರ್-ಔರಾದ್ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಮಾನದಂಡಗಳ ಪ್ರಕಾರ ಪ್ರಾಧಿಕಾರದ ಎಂಜಿನಿಯರ್ ಮೇಲ್ವಿಚಾರಣೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಈ ಕಾಮಗಾರಿಯಲ್ಲಿ ಯಾವುದೇ ರೀತಿಯ ಕಳಪೆ ಆಗಿಲ್ಲ’ ಎಂದು ಹೆದ್ದಾರಿ ಪ್ರಾಧಿಕಾರ ವರದಿ ನೀಡಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.