ಔರಾದ.13.ಮಾರ್ಚ.25:- ಔರಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು ದಿನಗಳಿಂದ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಸ್ವಲ್ಪದಿಂದಲ್ಲಿ ಕಾಲೇಜು ಮುಚ್ಚುವ ಹಂತಕ್ಕೆ ತಲುಪಲಿದೆ ಎಂದು ಶಾಸಕ ಪ್ರಭು ಚವಾಣ್ ಅವರು ಮಾಹಿತಿ ನೀಡಿದ್ದಾರೆ .
ಶಾಸಕ ಚವಾಣ್ ಗುರುವಾರು ಬೆಂಗಳೂರಿನ ವಿಧಾನಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರನ್ನು ಭೇಟಿ ಮಾಡಿ ಪಾಲಿಟೆಕ್ನಿಕ್ ಕಾಲೇಜಿನ ಸ್ಥಿತಿಗತಿ ಕುರಿತು ಮನವರಿಕೆ ಮಾಡಿಕೊಟ್ಟರು.

ಹಿಂದುಳಿದ ತಾಲ್ಲೂಕಿನ ಮಕ್ಕಳ ಬದುಕಿಗೆ ಅನುಕೂಲವಾಗಲಿದೆ ಎಂಬ ಉದ್ದೇಶದಿಂದ ಇಲ್ಲಿ ಪಾಲಿಟೆಕ್ನಿಕ್ ಕಾಲೇಜು ಆರಂಭಿಸಲಾಗಿದೆ. ನೂರಾರು ವಿದ್ಯಾರ್ಥಿಗಳು ಇಲ್ಲಿ ಓದುತ್ತಿದ್ದಾರೆ.
ವಿವಿಧ ವೃತ್ತಿಪರ ಕೋರ್ಸಗೆ ಬೇಕಾದ 27 ಕಾಯಂ ಉಪನ್ಯಾಸಕರ ಪೈಕಿ ಒಬ್ಬರು ಮಾತ್ರ ಇದ್ದಾರೆ. ಇದರಿಂದಾಗಿ ಮಕ್ಕಳ ಅಭ್ಯಾಸಕ್ಕೆ ಹಿನ್ನಡೆಯಾಗುತ್ತಿದೆ. ತೀರಾ ಅಗತ್ಯವಿರುವ ಉಪನ್ಯಾಸಕರನ್ನು ತಕ್ಷಣ ನೇಮಕ ಮಾಡಬೇಕು ಎಂದು ಶಾಸಕರು ಮನವಿ ಮಾಡಿದರು.
ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇದೆ. ಹೊಸದಾಗಿ ಹುದ್ದೆ ಭರ್ತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರು ಶಾಸಕರಿಗೆ ತಿಳಿಸಿದರು.