ಬೆಂಗಳೂರು.14.ಮಾರ್ಚ.25:- ಬಿಜೆಪಿ ಮುಖಂಡ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್, ಅವರು ಅಧಿವೇಶನದಲ್ಲಿ ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಲೇಜುಗಳಲಿ ಕಾಯಂ ಪ್ರಾಂಶುಪಾಲರ ಹುದ್ದೆ ಖಾಲಿ ಇರುವುದರಿಂದ ಆಗುತ್ತಿರುವ ಶೈಕ್ಷಣಿಕ ಹಿನ್ನಡೆ ಬಗ್ಗೆ ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.
ಮಾನ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಮಾನ್ಯ ಕಂದಾಯ ಸಚಿವರ ಸಮ್ಮುಖದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಪ್ರಾಂಶುಪಾಲರ ಹುದ್ದೆಗಳ ನೇಮಕಾತಿಯಲ್ಲಿನ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಕೆನೆಪದರ ಮೀಸಲಾತಿ ಹಾಗೂ ಗ್ರಾಮೀಣ ಅಭ್ಯರ್ಥಿಗಳಿಗೆ ಮೀಸಲಾತಿ ಹಾಗೂ ಸಿಂಧುತ್ವ ಪ್ರಮಾಣ ಪತ್ರ ವಿತರಿಸುವ ಸಂಬಂಧ ಚರ್ಚಿಸಲು ದಿನಾಂಕ:14.03.2025 ರಂದು ಬೆಳಿಗ್ಗೆ 11.00 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿ ಸಂಖ್ಯೆ:313 ರಲ್ಲಿ ಸಭೆ ಆಯೋಜಿಸುವಂತೆ ಸೂಚಿಸಲಾಗಿದೆ ಈ ಹಿನ್ನೆಲೆಯಲ್ಲಿ, ಸದರಿ ಸಭೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗುವಂತೆ ತಮ್ಮನ್ನು ಕೋರಲು ಮಾನ್ಯ ಸಚಿವರಿಂದ ನಿರ್ದೇಶಿತನಾಗಿದ್ದೇನೆ.
