ಬೀದರ.18.ಮಾರ್ಚ.25- ಅಂಗನವಾಡಿ ಕಾರ್ಯಕರ್ತೆಯವರಿಗೆ ಹಣ್ಣು ಮತ್ತು ತರಕಾರಿಗಳಲ್ಲಿರುವ ಪೌಷ್ಟಿಕಾಂಶದ ಬಗ್ಗೆ, ಪ್ಲಾಸ್ಟಿಕ್ ನಿಷೇಧದ ಕುರಿತು ಮತ್ತು ಪ್ಲಾಸ್ಟಿಕ್ನಿಂದ ಆಗುವ ದುಷ್ಟರಿಣಾಮಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯವರಿಗೆ ತಮ್ಮ ಪ್ರಸ್ತಾನಿಕ ನುಡಿಗಳನ್ನು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಸ್.ಶ್ರೀಧರ ಅವರು ತಿಳಿಸಿದರು.
ಅವರು ಇತ್ತೀಚಿಗೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಮತ್ತು ಅಡ್ವರ್ ಟೈಸಿಂಗ್ ಲಿಮಿಟೆಡ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಅವರ ಸಹಯೋಗಿತ್ವದಲ್ಲಿ ರಾಷ್ಟಿçÃಯ ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ ಬಾಲ ಭವನ ಸಮಿತಿ ಬೀದರನಲ್ಲಿ ಅಂಗನವಾಡಿ ಕಾರ್ಯಕರ್ತೆಯವರಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ನಿರೂಪಣಾಧಿಕಾರಿ ಗುರುರಾಜ ಪೌಷ್ಟಿಕಾಂಶದ ಆಹಾರ ಸೇವನೆ ಬಗ್ಗೆ ತಿಳಿಸಿದರು. ನವಚೈತನ್ಯ ಫೌಂಡೇಶನ್ ವತಿಯಿಂದ ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳಾದ ಪ್ರಭುಗೌಡ ಪಾಟೀಲ್ ಅವರು ರಾಷ್ಟಿö್ಯÃಯ ಪೋಷಣ ಅಭಿಯಾನ ಯೋಜನೆಯ ಹುಟ್ಟು, ಗುರಿ, ಉದ್ದೇಶ ಮತ್ತು ಸಮರ್ಪಕವಾಗಿ ಪೌಷ್ಟಿಕಾಂಶದ ಹಲವು ವಿಚಾರಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯವರಿಗೆ ಸವಿಸ್ತಾರವಾಗಿ ಮಾತನಾಡಿದರು. ಜಿಲ್ಲಾ ಸಂಯೋಜಕರಾದ ಅನಿತಾರವರು ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರತಿ ಗ್ರಾಮ ಪಂಚಾಯತಿಯಿAದ ಒಬ್ಬರಂತೆ ಅಂಗನವಾಡಿ ಕಾರ್ಯಕರ್ತೆಯವರು ಹಾಗೂ ತಾಲೂಕುಗಳಲ್ಲಿ ಕಾರ್ಯ ನಿರ್ವಹಿಸಿತ್ತಿರುವ ಪೋಷಣ ಅಭಿಯಾನ ಯೋಜನೆಯ ವಿಷಯನಿರ್ವಾಹಕರು ಪೋಷಣ ಸಿಬ್ಬಂದಿಗಳು ಭಾಗವಹಿಸಿದರು. ಕೊನೆಯದಾಗಿ ವಂದನಾರ್ಪಣೆಯನ್ನು ರಾಷ್ಟಿçÃಯ ಪೋಷಣ ಅಭಿಯಾನದ ಜಿಲ್ಲಾ ಸಹಾಯಕ ಸಂಯೋಜಕರಾದ ರವಿವರ್ಮರವರ ವಂದನಾರ್ಪಣೆಯೊAದಿಗೆ ಕಾರ್ಯಗಾರವನ್ನು ಮುಕ್ತಾಯಗೊಳಿಸಿದರು.