ಬೀದರ.26.ಮಾರ್ಚ.25:- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೆಸನ್ ಕಿಟ್ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಕಛೇರಿಯಿಂದ ಸ್ವೀಕೃತಿಯಾದ 1000 ಮೇಸನ್ ಕೀಟ್ಗಳನ್ನು ಪ್ರತಿ ಕಾರ್ಮಿಕ ನಿರೀಕ್ಷಕರ ಕಛೇರಿಗಳಿಗೆ 200 ಕಿಟ್ಗಳಂತೆ ಹಂಚಿಕೆ ಮಾಡಲಾಗಿರುತ್ತದೆ.
ಕಾರಣ ಅರ್ಹರು ದಿನಾಂಕ: 05-04-2025 ರೊಳಗೆ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಚಾಲ್ತಿಯಲ್ಲಿರುವ ಹಾಗೂ ಇ-ಕೆ.ವಾಯ್.ಸಿ. ಮಾಡಿರುವ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಹಾಗೂ ಆಧಾರ ಕಾರ್ಡ ಝಿರಾಕ್ಸ್ ಪ್ರತಿಯೊಂದಿಗೆ ಆಯಾ ಕಾರ್ಮಿಕ ನಿರೀಕ್ಷಕರ ಕಛೇರಿಗಳಾದ ಬೀದರ, ಭಾಲ್ಕಿ, ಔರಾದ (ಬಿ), ಹುಮನಾಬಾದ ಮತ್ತು ಬಸವಕಲ್ಯಾಣದಲ್ಲಿ ಅರ್ಜಿ ಸಲ್ಲಿಸಬೇಕು.
ಸ್ವೀಕೃತಿಯಾದ ಅರ್ಜಿಗಳನ್ನು ಪಟ್ಟಿ ಮಾಡಿ ಜೇಷ್ಠತೆ ಆಧಾರದ ಮೇಲೆ ಹಂಚಿಕೆ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.