ಬೀದರ.27.ಮಾರ್ಚ್.25:- ಬೀದರ ಜಿಲ್ಲೆ ಕಮಲನಗರ್ ತಾಲೂಕಿನ ಡಿಗ್ಗಿ ಗ್ರಾಮದ 9ನೇ ವಿದ್ಯಾರ್ಥಿನಿ ಮೊಬೈಲ್ ಜಾಸ್ತಿ ನೋಡಬೇಡ ಎಂದು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ವಿಪರೀತವಾಗಿ ಮೊಬೈಲ್ ನೋಡುವ ಗೀಳು ಬೆಳೆಸಿಕೊಂಡಿದ್ದ ವಿದ್ಯಾರ್ಥಿನಿಗೆ ಜಾಸ್ತಿ ಮೊಬೈಲ್ ನೋಡಬೇಡಾ ಅಂದಿದ್ದಕೆ ಬುದ್ಧಿಮಾತು ಹೇಳಿದರು ಓದಿನ ಕಡೆ ಗಮನ ಕೊಡು ಎಂದು ಮನನೊಂದು ಬಾಲಕಿ ಸೋನಿ (16) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.