ಬೆಂಗಳೂರು.27.ಮಾರ್ಚ್.25:-ಕುಟುಂಬವನ್ನಾಗಲಿ, ಸಂಸ್ಥೆಗಳನ್ನಾಗಲಿ ಅಥವಾ ವಾಹನವೇ ಆಗಿರಲಿ, ಎಲ್ಲವನ್ನೂ ಮಹಿಳೆಯರು ಅತ್ಯಂತ ಜವಾಬ್ದಾರಿಯಿಂದ ಮುನ್ನಡೆಸಬಲ್ಲರು.
ಗ್ರಾಮೀಣ ಭಾಗದಲ್ಲಿ ನೈರ್ಮಲ್ಯ ಕಾಪಾಡಿ, ಕಸ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ, ಇದರ ಭಾಗವಾಗಿರುವ ‘ಸ್ವಚ್ಛ ವಾಹಿನಿ’ ಯೋಜನೆಯು ಒಂದು ಪ್ರಗತಿಪರ ಮತ್ತು ಕ್ರಾಂತಿಕಾರಕ ಹೆಜ್ಜೆಯಾಗಿದೆ.
ಗ್ರಾಮೀಣ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿಗಳನ್ನಾಗಿಸುವ ನಿಟ್ಟಿನಲ್ಲಿ ಕಸ ನಿರ್ವಹಣೆಯಲ್ಲಿ ಮಹಿಳೆಯರಿಗೆ ಮುಂದಾಳತ್ವ ವಹಿಸಲಾಗಿದೆ, ಸ್ವಚ್ಛ ವಾಹಿನಿಯ ವಾಹನಗಳಿಗೆ ಮಹಿಳೆಯರನ್ನೇ ಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ.
ಸ್ವಚ್ಛ ವಾಹಿನಿಯ ಚಾಲಕಿಯರು ಇಂದು ಭೇಟಿಯಾಗಿ ಕೆಲವು ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದರು, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಕಾರ್ಯನಿರ್ವಹಿಸಲು ಉತ್ತಮ ವಾತಾವರಣ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಒಂದು ವಾರದೊಳಗಾಗಿ ಅಧಿಕಾರಿಗಳ ಸಭೆ ಕರೆದು ಚರ್ಚಿಸುವ ಭರವಸೆ ನೀಡಿದ್ದೇನೆ.
ಗ್ರಾಮೀಣ ಮಹಿಳೆಯರು ಔದ್ಯೋಗಿಕವಾಗಿ ತೊಡಗಿಸಿಕೊಳ್ಳಲು ಉತ್ಸಾಹ ತೋರಿಸಿರುವಾಗ ಅವರಿಗೆ ಉತ್ತಮ ವಾತಾವರಣ ನೀಡಿ ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ.
