08/06/2025 3:22 PM

Translate Language

Home » ಲೈವ್ ನ್ಯೂಸ್ » ಗಿಡಗಳನ್ನು ಬೆಳೆಸುವುದರ ಮೂಲಕ ನಾವೇಲ್ಲರೂ ಪರಿಸರಕ್ಕೆ ಕೊಡುಗೆ ನೀಡಬೇಕು-ನ್ಯಾ.ಪ್ರಕಾಶ ಬನಸೋಡೆ

ಗಿಡಗಳನ್ನು ಬೆಳೆಸುವುದರ ಮೂಲಕ ನಾವೇಲ್ಲರೂ ಪರಿಸರಕ್ಕೆ ಕೊಡುಗೆ ನೀಡಬೇಕು-ನ್ಯಾ.ಪ್ರಕಾಶ ಬನಸೋಡೆ

Facebook
X
WhatsApp
Telegram

ವಿಶ್ವ ಜಲ ದಿನ ಹಾಗೂ NALSA Legal Services to Victims of Acid
Attack Scheme 2016 ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ.


ಬೀದರ.29.ಮಾರ್ಚ.25:-ನೀರು ಉಳಿಸಲು ನಾವೆಲ್ಲರೂ ಕೈಜೋಡಿಸಬೇಕು, ಜೊತೆಗೆ ಪರಿಸರ ಹಾನಿಯನ್ನು ಆದಷ್ಟು ತಡೆಯಬೇಕು, ಗಿಡಗಳನ್ನು ಬೆಳೆಸುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಹೇಳಿದರು.


ಅವರು ಇಂದು  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಪಂಚಾಯತ ಬೀದರ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಬೀದರನ ಬೇನಕನಳ್ಳಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಲ ದಿನ ಹಾಗೂ NALSA Legal Services to Victims of Acid Attack Scheme 2016  ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಅಂತರ್ಜಲ ಹೆಚ್ಚಿಸುವ ಕ್ರಮಗಳಾದ ಇಂಗುಗುಂಡಿ, ಮಳೆನೀರಿನ ಕೊಯ್ಲು ಮುಂತಾದ ಅಗತ್ಯ ಕ್ರಮಗಳನ್ನು ಮನೆಗಳಿಂದಲೇ ಆರಂಭಿಸಬೇಕೆಂದರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸವಲತ್ತುಗಳ ಬಗ್ಗೆ ಹಾಗೂ Victims of Acid Attack Scheme 2016  ಬಗ್ಗೆ ಮಾತನಾಡಿದರು.


ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಗಳಾದ ನಾಗೇಂದ್ರ ಬಿರಾದರ ಅವರು ಮಾತನಾಡಿ, ಸಮಾಜದಲ್ಲಿ ಜನರು ನೀರಿನ ಬಳಕೆ ಮತ್ತು ಮಹತ್ವ ಕುರಿತು ಮಾತನಾಡಿದರು.


ಈ ಕಾರ್ಯಕ್ರಮದಲ್ಲಿ ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ, ಬೀದರ ವಕೀಲರಾದ ಕೃಷ್ಣಪ್ಪಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಂಜೀವಕುಮಾರ ಶಳಕೆ, ಉಮೇಶ ಜಾಬಾ,, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಯಾದ ಆಕಾಶ ಸಜ್ಜನಶೆಟ್ಟಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ಬೇನಕನಳ್ಳಿ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!