09/06/2025 4:57 PM

Translate Language

Home » ಲೈವ್ ನ್ಯೂಸ್ » ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ವೇಳೆಯಲ್ಲಿ ಬದಲಾವಣೆ ಆದೇಶ

ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ವೇಳೆಯಲ್ಲಿ ಬದಲಾವಣೆ ಆದೇಶ

Facebook
X
WhatsApp
Telegram

ಬೆಂಗಳೂರು.02.ಏಪ್ರಿಲ್.25:- ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

ಅದರಲ್ಲಿ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾಯಿಸಿ ಆದೇಶಿಸಿದ್ದಾರೆ.

ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು, ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!