09/06/2025 4:54 PM

Translate Language

Home » ಲೈವ್ ನ್ಯೂಸ್ » ಯಳಂದೂರು ತಾಲ್ಲೂಕು ಕಛೇರಿ ಸುತ್ತಲೂ ಅನೈರ್ಮಲ್ಯ, ಪ್ಲಾಸ್ಟಿಕ್ ದರ್ಬಾರ್, ಕಣ್ಣು ಮುಚ್ಚಿ ಕೂತಿರುವ ಆಡಳಿತ.

ಯಳಂದೂರು ತಾಲ್ಲೂಕು ಕಛೇರಿ ಸುತ್ತಲೂ ಅನೈರ್ಮಲ್ಯ,  ಪ್ಲಾಸ್ಟಿಕ್ ದರ್ಬಾರ್, ಕಣ್ಣು ಮುಚ್ಚಿ ಕೂತಿರುವ ಆಡಳಿತ.

Facebook
X
WhatsApp
Telegram

ಯಳಂದೂರು: ಪಟ್ಟಣದ ತಾಲ್ಲೂಕು ಕಛೇರಿಯ ಸುತ್ತಲೂ ಪ್ಲಾಸ್ಟಿಕ್ ಮತ್ತು ಘನತ್ಯಾಜ್ಯ ವಸ್ತುಗಳಿಂದ ಕೂಡಿದೆ ಇದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಪ್ರತಿನಿತ್ಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುತ್ತಿದ್ದಾರೆ. ಕಛೇರಿಯ ಸುತ್ತಲೂ ಅಶಿಸ್ತುನಿಂದ ಕೂಡಿರುವುದನ್ನು ನೋಡಿ ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ ಆದರೂ ತಾಲ್ಲೂಕು ಆಡಳಿತ ನಿರ್ಜೀವ ವಸ್ತುವಿನಂತಾಗಿದೆ. ಇದರಿಂದ  ತನ್ನ ನಿರ್ಲಕ್ಷ್ಯ ತನವನ್ನು ತೋರಿಸುತ್ತದೆ.



ಗಿಡದ ಬಳ್ಳಿಗಳು  ತಾಲ್ಲೂಕು ಆಡಳಿತ ಕಟ್ಟಡದ ಮೇಲೆ ಏರಿದೆ ಗಿಡದ ಬಳ್ಳಿಯ ಮೂಲಕ   ಹಾವು ಚೇಳುಗಳು ಕಟ್ಟಡದೊಳಗೆ ಪ್ರವೇಶ ಮಾಡಿ ಇವುಗಳ ವಾಸಸ್ಥಾನವಾಗಿದೆ.

ಚಾಮರಾಜನಗರ ಜಿಲ್ಲಾಧಿಕಾರಿಗಳು ಪ್ಲಾಸ್ಟಿಕ್ ಮುಕ್ತ ಮಾಡಬೇಕೆಂದು ಪಣತೊಟ್ಟಿದ್ದಾರೆ ಆದರೆ ತಾಲ್ಲೂಕು ಕಛೇರಿಯ ಸುತ್ತಲೂ ಬರೀ ಪ್ಲಾಸ್ಟಿಕ್ ನಿಂದಲೇ ಕೂಡಿ ಅನೈರ್ಮಲ್ಯ ಸೃಷ್ಟಿಯಾಗಿದೆ.
ಸಾರ್ವಜನಿಕರಿಗೆ ಶಿಸ್ತಿನ ಬಗ್ಗೆ ತಿಳಿಸುವಂತಹ ಆಡಳಿತವೇ ಅಶಿಸ್ತಿನಿಂದ ಕೂಡಿದೆ.

ಬೇಸಿಗೆ ಹಿನ್ನಲೆಯಾದರೂ ಸಹ ಸಾರ್ವಜನಿಕರಿಗೆ ಕುಡಿಯುವ ನೀರುನ್ನು ಪೂರೈಸುವಂತಹ ಕೆಲಸ ಮಾಡಿಲ್ಲ. ಎಷ್ಟೋ ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳ ಮೊರೆಹೋಗಿದ್ದಾರೆ
ಕಾಟಾಚಾರಕ್ಕೆ ಇಲ್ಲಿನ ಆಡಳಿತ ಕಾರ್ಯ ನಿರ್ವಹಿಸುತ್ತದೆ ಎಂದರೆ ತಪ್ಪಾಗಲಾರದು.


ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸಾರ್ವಜನಿಕರು ದೂರಿದರು.

_ಜಿ ಪ್ರಸನ್ನ ಕುಮಾರ್ ಕಿತ್ತೂರು

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!