ಪಾಟ್ನಾ.13.ಎಪ್ರಿಲ್.25:- ಇಂದು ಪಾಟ್ನಾದಲ್ಲಿ ಭಾರತ್ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಏಪ್ರಿಲ್ 14ರಂದು ನವದೆಹಲಿಯ ಸಂಸತ್ ಭವನದ ಹುಲ್ಲುಹಾಸಿನ ಪ್ರೇರಣಾ ಸ್ಥಳದಲ್ಲಿ ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಾಗೂ ಡಾ.ಅಂಬೇಡ್ಕರ್ ಪ್ರತಿಷ್ಠಾನ ಸಂಯುಕ್ತವಾಗಿ ಆಯೋಜಿಸಿವೆ.
ರಾಷ್ಟ್ರಪತಿ, ಉಪರಾಷ್ಟ್ರಪತಿ, ಲೋಕಸಭಾಧ್ಯಕ್ಷ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದೇ ವೇಳೆ ಡಿಎಎಫ್ ವತಿಯಿಂದ ಅಲಿಪುರ ರಸ್ತೆಯಲ್ಲಿರುವ ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕಕ್ಕೆ ಸಾರ್ವಜನಿಕರನ್ನು ಕರೆದೊಯ್ಯಲು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಅಂಬೇಡ್ಕರ್ ಪ್ರತಿಷ್ಠಾನವು ಅವರ ಸಂದೇಶ ಮತ್ತು ಸಿದ್ಧಾಂತಗಳನ್ನು ಹರಡುವ ನಿಟ್ಟಿನಲ್ಲಿ ದೇಶದಾದ್ಯಾಂತ ಚಟುವಟಿಕೆಗಳನ್ನು ನಡೆಸುತ್ತಿದೆ.