ಬೆಂಗಳೂರು.22.ಏಪ್ರಿಲ್.25:- ಕೃಷಿ ಕಾರ್ಮಿಕರ ಕೊರತೆಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಇದನ್ನು ನಿವಾರಿಸಲು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ನೀಡಲಾಗುತ್ತಿದೆ.
ಕಬ್ಬು ಕಟಾವು ಯಂತ್ರಗಳು ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ₹40 ಲಕ್ಷ ಮತ್ತು ಪರಿಶಿಷ್ಟ ರೈತರಿಗೆ ಗರಿಷ್ಠ ₹50 ಲಕ್ಷ ರಿಯಾಯಿತಿ ಸಿಗುತ್ತಿದೆ. ಇದು ದೇಶದಲ್ಲೇ ಮೊದಲು. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಯಂತ್ರೋಪಕರಣ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.