ಶ್ರೀನಗರ.11.ಮೇ.25:- ಪಾಕಿಸ್ತಾನದ ಅಪ್ರಚೋದಿನ ದಾಳಿಗೆ ಬಿಎಸ್ಎಸ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜತೆಗೆ 7 ಮಂದಿ ಗಾಯಗೊಂಡಿದ್ದಾರೆ. ಮೇ 10ರಂದು ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ಸಮೀಪ ಪಾಕ್ ಶೆಲ್ ದಾಳಿ ನಡೆಸಿದ್ದು, ಬಿಎಸ್ಎಫ್ ಯೋಧ ಮೊಹಮ್ಮದ್ ಇಮ್ತಿಯಾಸ್ ವೀರ ಮರಣ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮುವಿನ ಆರ್.ಎಸ್.ಪುರ ಸೆಕ್ಟರ್ ಬಳಿ ಈ ದಾಳಿ ನಡೆದಿದೆ.ಪಾಕಿಸ್ತಾನದ ಅಪ್ರಚೋದಿನ ದಾಳಿಗೆ ಬಿಎಸ್ಎಸ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಮೇ 10ರಂದು ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ಸಮೀಪ ಪಾಕ್ ಶೆಲ್ ದಾಳಿ ನಡೆಸಿದ್ದು, ಬಿಎಸ್ಎಫ್ ಯೋಧ ಮೊಹಮ್ಮದ್ ಇಮ್ತಿಯಾಸ್ ವೀರ ಮರಣ ಹೊಂದಿದ್ದಾರೆ. ಗಾಯಗೊಂಡ ಬಿಎಸ್ಎಫ್ನ 7 ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ʼʼಸಬ್ ಇನ್ಸ್ಪೆಕ್ಟರ್ ಮೊಹಮ್ಮದ್ ಇಮ್ತಿಯಾಸ್ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆʼʼ ಎಂದು ಬಿಎಸ್ಎಫ್ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ʼʼದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಬಿಎಸ್ಎಫ್ನ ಧೀರ ಯೋಧ ಸಬ್ ಇನ್ಸ್ಪೆಕ್ಟರ್ ಮೊಹಮ್ಮದ್ ಇಮ್ತಿಯಾಸ್ ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಪಾಕಿಸ್ತಾನ ಅಪ್ರಚೋದಿನ ದಾಳಿ ವೇಳೆ ಅವರು ಮೇ 10ರಂದು ಹುತಾತ್ಮರಾಗಿದ್ದಾರೆ. ಅಂತಾರಾಷ್ಟ್ರೀಯ ಗಡಿ ಜಮ್ಮುವಿನ ಆರ್.ಎಸ್.ಪುರ ಸೆಕ್ಟರ್ ಬಳಿ ಈ ದಾಳಿ ನಡೆದಿದೆʼʼ ಎಂದು ಬಿಎಸ್ಎಫ್ ಎಕ್ಸ್ ಮೂಲಕ ತಿಳಿಸಿದೆ. ಇಮ್ತಿಯಾಸ್ ಅವರಿಗೆ ಮೇ 11ರಂದು ಅಂತಿಮ ಗೌರವ ಸಲ್ಲಿಸಲಾಗುತ್ತದೆ. ಗಾಯಗೊಂಡ ಇತರ ಬಿಎಸ್ಎಫ್ ಯೋಧರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ಭಾರತದ ಸುಮಾರು 2,000 ಕಿ.ಮೀ. ಉದ್ದದ ಗಡಿಯ ರಕ್ಷಣೆಯ ಜವಾಬ್ದಾರಿ ಹೊತ್ತುಕೊಂಡಿದೆ.
ಮೇ 10ರ ಸಂಜೆಯಷ್ಟೇ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ್ದ ಪಾಕಿಸ್ತಾನ ಸಂಜೆಯಾಗುತ್ತಿದ್ದಂತೆ ಉಲ್ಲಂಘಿಸಿದ್ದು, ಮತ್ತೆ ಭಾರತದತ್ತ ದಾಳಿ ಮುಂದುವರಿಸಿದೆ. ಗಡಿ ರಾಜ್ಯಗಳಾದ ಜಮ್ಮು ಕಾಶ್ಮೀರ, ಗುಜರಾತ್, ಪಂಜಾಬ್, ರಾಜಸ್ಥಾನಗಳಲ್ಲಿ ವಿವಿಧ ಕಡೆಗಳಲ್ಲಿ ಪಾಕ್ನ ಹಲವು ಡ್ರೋನ್ಗಳು ಕಂಡು ಬಂದಿದ್ದು, ಭಾರತೀಯ ಸೇನೆ ಹೊಡೆದುರುಳಿಸಿದೆ.