09/06/2025 12:33 AM

Translate Language

Home » ಲೈವ್ ನ್ಯೂಸ್ » ತಿರಂಗ ಯಾತ್ರೆ ವೇಳೆ ಶಾಸಕ ಪ್ರಭು ಚೌಹಾಣ್ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ತಿರಂಗ ಯಾತ್ರೆ ವೇಳೆ ಶಾಸಕ ಪ್ರಭು ಚೌಹಾಣ್ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Facebook
X
WhatsApp
Telegram

ಬೀದರ.26.ಮೇ.25:- ಇಂದು ಅಪರೇಷನ್‌ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ.

ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಪಟ್ಟಣದ ಪ್ರವಾಸಿ ಮಂದಿರದಿಂದ ಎಪಿಎಂಸಿ ವೃತ್ತದವರೆಗೆ ನಡೆದ ತಿರಂಗಾ ಯಾತ್ರೆಯ ನೇತ್ರತ್ವ ವಹಿಸಿದ್ದ ಶಾಸಕರು ಧ್ವಜ ಹಿಡಿದು ಹೆಜ್ಜೆ ಹಾಕಿದರು. ಎಪಿಎಂಸಿ ಎದುರುಗಡೆಯ ಕನ್ನಡಾಂಬೆ ವೃತ್ತದಲ್ಲಿ ಸಮಾವೇಶ ನಡೆಯುವ ವೇಳೆ ಶಾಸಕರು ಕುಳಿತಲ್ಲೇ ನಿಶಕ್ತರಾದರು.

ಶಾಸಕರು ಮೆರವಣಿಗೆಯಲ್ಲಿ ಕುಣಿದು ದಣಿದಿದ್ದಾರೆ. ಹೀಗಾಗಿ ಸುಸ್ತಾಗಿ ತಲೆ ಸುತ್ತಿದೆ. ಬೇರೆ ಏನೂ ಸಮಸ್ಯೆ ಇಲ್ಲ. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರ ಶಾಸಕರ ಆಪ್ತರು ತಿಳಿಸಿದ್ದಾರೆ.



ಯಾತ್ರೆಯಲ್ಲಿ ಬೀದ‌ರ್ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಸೇರಿದಂತೆ ಬಿಜೆಪಿ ಮುಖಂಡರು, ವಿವಿಧ ಮಠಾಧೀಶರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!