09/06/2025 7:54 AM

Translate Language

Home » ಲೈವ್ ನ್ಯೂಸ್ » ಅಹಿತಕರ ಘಟನೆ ಆಗದಂತೆ ಶಾಂತತೆಯಿoದ ಬಕ್ರೀದ್
ಹಬ್ಬವನ್ನು ಆಚರಿಸಿ-ಚಂದ್ರಕಾoತ ಪೂಜಾರಿ

ಅಹಿತಕರ ಘಟನೆ ಆಗದಂತೆ ಶಾಂತತೆಯಿoದ ಬಕ್ರೀದ್
ಹಬ್ಬವನ್ನು ಆಚರಿಸಿ-ಚಂದ್ರಕಾoತ ಪೂಜಾರಿ

Facebook
X
WhatsApp
Telegram

ಬೀದರ.04.ಜೂನ್.25:- ಯಾವುದೇ ಧರ್ಮದ ಹಬ್ಬ ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡಬೇಕು. ಈ ದಿಸೆಯಲ್ಲಿ ಮುಸ್ಲಿಂ ಹಾಗೂ ಹಿಂದು ಬಾಂಧವರು ಒಗಟ್ಟಾಗಿ ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ಶಾಂತತೆಯಿoದ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಬೇಕೆಂದು ಹೆಚ್ಚುವರಿ ಜಿಲ್ಲಾ ಅಧೀಕ್ಷಕರಾದ ಚಂದ್ರಕಾAತ ಪೂಜಾರಿ ತಿಳಿಸಿದರು.


ಅವರು ಮಂಗಳವಾರದoದು ಜೂನ್.7 ರ ಬ್ರಕೀದ ಹಬ್ಬದ ಅಂಗವಾಗಿ ಬೀದರ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಹಿಂದು ಹಾಗೂ ಮುಸ್ಲಿಂ ಸಮುದಾಯಗಳ ಮುಖಂಡರ ಸೌಹಾದ ಸಭೆ ನಡೆಸಿ ಮಾತನಾಡಿದರು.


ತ್ಯಾಗ ಸೌಹಾರ್ದ ಸಂಕೇತ ಹಬ್ಬ ಬಕ್ರೀದ್ ಆಗಿದ್ದು, ಪ್ರೀತಿ-ಸಹೋದರತ್ವ ಸಾರಲು ಈ ಹಬ್ಬ ಆಚರಿಸಲಾಗುತ್ತದೆ. ಈ ಸಮಯದಲ್ಲಿ ಗೋವುಗಳ ಅಕ್ರಮ ಸಾಗಾಟ ಕಂಡುಬAದರೆ ಪೊಲೀಸ್ ಗಮನಕ್ಕೆ ತರಬೇಕು.

ಗೋಹತ್ಯೆ ಕಾಯ್ದೆ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ಹಾಗೂ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡಲಾಗಿದ್ದು, ಪ್ರಚೋದನಕಾರಿ ಪೋಸ್ಟ್ಗಳು, ದ್ವೇಷ್ ಭಾಷಣ ಮಾಡಿ ಸಮಾಜದ ಸ್ವಾಸ್ತö್ಯ ಹಾಳು ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಹೇಳಿದರು.


ಈ ಸಭೆಯಲ್ಲಿ ಬೀದರ ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಬೀದರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶಿವನಗೌಡ ಪಾಟೀಲ್, ಭಾಲ್ಕಿ ಪೊಲೀಸ್ ಉಪಾಧೀಕ್ಷಕರಾದ ಶಿವಾನಂದ ಪವಾಡಶೆಟ್ಟಿ, ಹುಮನಾಬಾದ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಜೆ.ಎಸ್.ನ್ಯಾಮೇಗೌಡ ಸೇರಿದಂತೆ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!