09/06/2025 2:59 PM

Translate Language

Home » ಲೈವ್ ನ್ಯೂಸ್ » ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

Facebook
X
WhatsApp
Telegram

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್

ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ ಜೂನ್ ಮೊದಲ ವಾರದವರೆಗೂ ಅಬ್ಬರಿಸಿದ್ದ ಮಳೆರಾಯ ಇದೀಗ ಶಾಂತನಾಗಿದ್ದಾನೆ. ಕರಾವಳಿ, ಉತ್ತರ ಕರ್ನಾಟಕದಲ್ಲಿ ಬಿಸಿಲು ಹೆಚ್ಚಾಗಿದೆ. ಕರ್ನಾಟಕದಲ್ಲಿ ಕ್ಷೀಣಿಸಿರುವ ಮುಂಗಾರು ಮತ್ತೆ ಚುರುಕಾಗಿ ಜೂ.11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಬಳ್ಳಾರಿ, ವಿಜಯನಗರದಲ್ಲಿ ಜೂ.12ರಿಂದ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಜೂ.13ರಿಂದ 2 ದಿನ, ಕೋಲಾರದಲ್ಲಿ ಜೂ.12ರಂದು ಬಿರುಸಾಗಿ ವರ್ಷಧಾರೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ಜೂ.14ರಂದು ಆರೆಂಜ್ ಅಲರ್ಟ್ ಇರಲಿದೆ.

ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.

ಜಿಲ್ಲಾವಾರು ಮುನ್ಸೂಚನೆ:

ಜೂನ್ 11: ಬಳ್ಳಾರಿ, ದಾವಣಗೆರೆ, ವಿಜಯನಗರ – ಎಲ್ಲೋ ಅಲರ್ಟ್
ಜೂನ್ 12: ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರ್ಗಿ, ಬೆಳಗಾವಿ, ಬಾಲಕೋಟೆ, ಕರಾವಳಿಯ ಎಲ್ಲಾ ಜಿಲ್ಲೆಗಳು – ಎಲ್ಲೋ ಅಲರ್ಟ್
ಸಾರ್ವಜನಿಕರ ಗಮನಕ್ಕೆ:

ರಸ್ತೆ ಅಥವಾ ರಸ್ತೆ ಬದಿಯಲ್ಲಿ ಅಥವಾ ತಗ್ಗು ಪ್ರದೇಶಗಳಲ್ಲಿ ನಿಂತ ನೀರಿನಲ್ಲಿ ವಾಹನ ಚಾಲನೆ ಅಥವಾ ನಡೆದುಕೊಂಡು ಹೋಗಬೇಡಿ.
ಮಳೆಯಲ್ಲಿಯೇ ವಾಹನ ಓಡಿಸುವ ವೇಳೆ ಎಚ್ಚರಿಕೆವಹಿಸಿ.
ಹಳ್ಳ, ಹೊಳೆ, ಕಾಲುವೆಗಳಿಗೆ ಅತಿದೂರ ಹೋಗದಂತೆ ಎಚ್ಚರಿಕೆ.
ಮಕ್ಕಳು ಹಾಗೂ ಹಿರಿಯರು ಮನೆಯಲ್ಲೇ ಉಳಿಯುವುದು ಉತ್ತಮ.
ಹವಾಮಾನ ಇಲಾಖೆ ಈ ಎಚ್ಚರಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಲು ಸಾರ್ವಜನಿಕರಿಗೆ ವಿನಂತಿಸಿದೆ. ರೈತರು ಕೂಡಾ ತಮ್ಮ ಕೃಷಿ ಚಟುವಟಿಕೆಗಳಲ್ಲಿ ಅನುಕೂಲವಾಗುವಂತೆ ಈ ಮಾಹಿತಿ ಆಧಾರಿತ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಸೂಕ್ತ.

ಕೊಡಗು ಜಿಲ್ಲೆಯ ಜನತೆಗೆ ಸ್ಥಳಾಂತರಕ್ಕೆ ನಗರಸಭೆ ಸೂಚನೆ:

ರಾಜ್ಯದ ಕಾಶ್ಮೀರ ಖ್ಯಾತಿಯ ಕೊಡಗು ಜಿಲ್ಲೆಯಲ್ಲಿ 2018 ರಿಂದ ನಿರಂತರವಾಗಿ 3-4 ವರ್ಷಗಳ ಕಾಲ ಭೂಕುಸಿತವಾಗಿದೆ. ಈ ವರ್ಷವೂ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂಬ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಮಡಿಕೇರಿ ನಗರಸಭೆ ಅಪಾಯಕಾರಿ ಪರಿಸ್ಥಿತಿ ಇರುವ ನಗರದ ಹಲವು ಬಡಾವಣೆಗಳ 200ಕ್ಕೂ ಹೆಚ್ಚು ಕುಟುಂಬಗಳು ತೀವ್ರ ಮಳೆಯ ಸಂದರ್ಭ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಿ ಎಂದು ನೋಟಿಸ್ ನೀಡಿದೆ. ಅಲ್ಲದೆ ಮಡಿಕೇರಿ ನಗರದ ಹಲವೆಡೆ ಕಾಳಜಿ ಕೇಂದ್ರವನ್ನು ತೆರೆಯಲು ನಗರಸಭೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ನಗರಸಭೆ ನೋಟೀಸ್ ನೀಡಿರುವುದನ್ನು ನೋಡಿದರೆ 2018 ರಂತೆಯೇ ಈ ಬಾರಿಯೂ ಮಡಿಕೇರಿ ನಗರದ ಹಲವು ಬಡಾವಣೆಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿನಾ ಎನ್ನುವ ಅನುಮಾನ ದಟ್ಟವಾಗುತ್ತಿದೆ. ಮಡಿಕೇರಿ ನಗರಸಭೆಯ ವ್ಯಾಪ್ತಿಯ ಇಂದಿರಾ ನಗರ, ಚಾಮುಂಡೇಶ್ವರಿ ನಗರಿ, ಮಂಗಳಾದೇವಿ ನಗರ, ಮಲ್ಲಿಕಾರ್ಜುನನಗರ, ತ್ಯಾಗರಾಜ ಕಾಲೋನಿ ಸೇರಿದಂತೆ ಹಲವು ಬಡಾವಣೆಗಳು ಅತೀ ಹೆಚ್ಚಿನ ಬೆಟ್ಟ ಪ್ರದೇಶದಿಂದ ಕೂಡಿವೆ. ಈ ಬಡಾವಣೆಗಳಲ್ಲಿರುವ ಬಹುತೇಕ ಮನೆಗಳು ಅಪಾಯದಲ್ಲಿ ಇವೆ ಎಂದು ಮಡಿಕೇರಿ ನಗರಸಭೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇವರಿಗೆ ಈಗಾಗಲೇ ನೋಟಿಸ್ ಅವನ್ನು ನೀಡಿರುವ ಅಧಿಕಾರಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!