09/06/2025 11:58 PM

Translate Language

Home » ಜೀಲ್ಲೆ » ಅಂಗವಿಕಲರ ನೆರವಿಗೆ ಅಧಿಕಾರಿಗಳು ಪ್ರಮಾಣಿಕ ಸೇವೆ ಸಲ್ಲಿಸಿ-ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ

ಅಂಗವಿಕಲರ ನೆರವಿಗೆ ಅಧಿಕಾರಿಗಳು ಪ್ರಮಾಣಿಕ ಸೇವೆ ಸಲ್ಲಿಸಿ-ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ

Facebook
X
WhatsApp
Telegram



              ಬೀದರ, ನವೆಂಬರ್.21:- ಅಂಗವಿಕಲರ ನೆರವಿಗೆ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಿ ಪ್ರಮಾಣಿಕ ಸೇವೆ ನೀಡುವಂತೆ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ಇಂದಿಲ್ಲಿ ಕರೆ ನೀಡಿದರು.
           ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿವಿಧ ಇಲಾಖೆಗಳಲಿ ವಿಕಲಚೇತನರ ಪುನರವಸತಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
          ಸರ್ಕಾರದ ಆದೇಶದಂತೆ ಎಲ್ಲಾ ಇಲಾಖೆಗಳ ಶೇ.5% ರಷ್ಟು ಅನುದಾನ ಕಡ್ಡಾಯವಾಗಿ ಅಂಗವಿಕಲರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ವ್ಯಯಿಸಬೇಕೆಂದು ತಿಳಿಸಿದ ಅವರು ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗದಲ್ಲಿಯೂ ಸಹ ಶೇ.5% ರಷ್ಟು ಮೀಸಲಿಡತಕ್ಕದ್ದು ಎಂದು ಅವರು ತಿಳಿಸಿದರು.
ಕೇಂದ್ರ ಸರ್ಕಾರದ ಪಿ.ಎಂ.ಡಿ.ಕೆ. ಯೋಜನೆಯಡಿ ಬೀದರ ಸೇರಿದಂತೆ ರಾಜ್ಯದ ನಾಲ್ಕು ಕಡೆ ಅಂಗವಿಕಲರ ಚಿಕಿತ್ಸೆಗಾಗಿ 50 ಕೋಟಿಗಳ ಅನುದಾನದಲ್ಲಿ ವ್ಯವಸ್ಥಿತವಾದದಂತಹ ಆಧುನಿಕ ಚಿಕಿತ್ಸಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದು ದಾಸ್ ಅವರು ತಿಳಿಸಿದರು.

          ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಂಗವಿಕಲರ ಅಭಿವೃದ್ಧಿ ಸಮಿತಿಯು ಪ್ರತಿ ತಿಂಗಳಿಗೊಮ್ಮೆ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ನಡೆಸತಕ್ಕದ್ದು, ಅಧಿಕಾರಿಗಳು ಅಂಗವಿಕಲರಿಗೆ ನಿರಾಸಕ್ತಿ ತೋರದೆ ಅಲೆದಾಡಿಸದೇ ಸಮಸ್ಯೆಗಳನ್ನು ಪರಿಹರಿಸಬೇಕೆಂದರು. ಒಟ್ಟು 21 ತರಹದ ವಿವಿಧ ಅಂಗವಿಕಲತೆಯನ್ನು ಗುರುತಿಸಲಾಗಿದೆ. ಎಲ್ಲಾ ಇಲಾಖೆಗಳ ಕಟ್ಟಡಗಳು ಅಂಗವಿಕಲ ಸ್ನೇಹಿಯಾಗಿರಬೇಕು. ಚಿಕ್ಕ ಮಕ್ಕಳಲ್ಲಿ ಅಂಗವಿಕಲತೆಯನ್ನು ಗುರುತಿಸಿ ತಕ್ಷಣವೇ ಚಿಕಿತ್ಸೆ ನೀಡುವಲ್ಲಿ ಅಧಿಕಾರಿಗಳು ಮುಂದಾಗಬೇಕು.

           ಅಧಿಕಾರಿಗಳು ಅಂಗವಿಕಲರಿಗೆ ದಾರಿ ದೀಪವಾಗಬೇಕೆಂದರು. ರಾಜ್ಯದ ಗ್ರಾಮ ಪಂಚಾಯತ ಮಟ್ಟದಲ್ಲಿ 7 ಸಾವಿರ ಅಂಗವಿಕಲರು ನೇಮಕವಾಗಿರುವುದು ದಾಖಲೆಯಾಗಿದೆ. ವಸತಿ ಶಾಲೆಗಳಲ್ಲಿ ಯಾವುದೇ ಪರೀಕ್ಷೆ ಇಲ್ಲದೇ ಅಂಗವಿಕಲ ವಿದ್ಯಾರ್ಥಿಗಳು ನೇರವಾಗಿ ಪ್ರವೇಶ ಪಡೆಯಬಹುದಾಗಿದೆ ಎಂದು ದಾಸ್ ಸೂರ್ಯವಂಶಿ ತಿಳಿಸಿದರು.
         ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಇಲಾಖಾವಾರು ಅಂಗವಿಕಲರ ಕುರಿತಾದ ಪ್ರಗತಿ ಪರಿಶೀಲನಾ ನಡೆಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಧರ ಎಂ.ಎಸ್. ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1.40 ಲಕ್ಷ ಆರು ವರ್ಷದೊಳಗಿನ ಮಕ್ಕಳಿದ್ದು ಪ್ರಸಕ್ತ ಸಾಲಿನಲ್ಲಿ 92 ಸಾವಿರ ಮಕ್ಕಳನ್ನು ಪರೀಕ್ಷಿಸಲಾಗಿ 208 ಅಂಗವಿಕಲ ಮಕ್ಕಳನ್ನು ಗುರುತಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಚಿಕ್ಕ ಮಕ್ಕಳ ಪರೀಕ್ಷೆ ಮಾಡುತ್ತಾರೆ. ಯಾವುದಾದರೂ ಸಮಸ್ಯೆ ಕಂಡುಬAದಲ್ಲಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುತ್ತಾರೆ. ರಾಷ್ಟಿçÃಯ ಬಾಲ ಸ್ವಾಸ್ಥ ಯೋಜನೆಯಡಿ ಅಂಗವಿಕಲ ಮಕ್ಕಳಿಗೆ ಹಲವಾರು ಸೌಲಭ್ಯಗಳಿದ್ದು, ಪ್ರತಿ ವರ್ಷ 50 ಸಾವಿರವರೆಗೆ ಚಿಕಿತ್ಸಾ ಅನುದಾನ ನೀಡಲು ಅವಕಾಶವಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಶಾ ಮಾತನಾಡಿ, ಎಲ್ಲಾ ಅಂಗವಿಕಲ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಪ್ರತಿ ಬ್ಲಾಕ್ ಹಂತದಲ್ಲಿ ಐ.ಸಿ.ಐ.ಆರ್. ತರಬೇತಿ ಹೊಂದಿದ ಶಿಕ್ಷಕರಿದ್ದಾರೆ. ಸಮಗ್ರ ಶಿಕ್ಷಣ ಯೋಜನೆಯಡಿ ಅಂಗವಿಕಲರಿಗೆ ಶಾಲೆಯಲ್ಲಿ ಹಾಗೂ ಗೃಹ ಆಧಾರಿತ ಶಿಕ್ಷಣ ನೀಡಲಾಗುತ್ತಿದೆ ಎಂದರು.
         ಜಿಲ್ಲಾ ಅಂಗವಿಕಲ ಅಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 42632 ಅಂಗವಿಕಲರಿದ್ದು, ಎಲ್ಲರಿಗೂ ಗುರುತಿನ ಚೀಟಿ ನೀಡಲಾಗಿದೆ ಎಂದರು.
ಸಾರಿಗೆ ಇಲಾಖೆಯ ಬಸ್ ನಿಲ್ದಾಣದ ಮಳಿಗೆಗಳಲ್ಲಿ ಶೇ.10% ರಷ್ಟು ಅಂಗವಿಕಲರಿಗೆ ಕಡ್ಡಾಯವಾಗಿ ಮೀಸಲಾಗಿದೆ, ಬಸ್ ನಿಲ್ದಾಣಗಳಲ್ಲಿ ತ್ರಿಚಕ್ರ ವಾಹನ ಇಡಲಾಗಿದೆ ಹಾಗೂ ಉಚಿತ ಪ್ರಯಾಣಕ್ಕೆ ಅವಕಾಶ ಇದೆ ಎಂದು ಅಧಿಕಾರಿಗಳು ತಿಳಿಸಿದರು.
           ಕೃಷಿ ಇಲಾಖೆಯಲ್ಲಿ 78 ಅಂಗವಿಕಲ ಕೃಷಿಕರನ್ನು ಗುರುತಿಸಲಾಗಿದ್ದು, ಅವರಿಗೆ ಬೀಜ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣವನ್ನು ನೀಡಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ. ಜಿಯಾವುಲ್ಲಾ ತಿಳಿಸಿದರು.
ತೋಟಗಾರಿಕೆ ಇಲಾಖೆಯಲ್ಲಿ 43 ಅಂಗವಿಕಲರು ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿದ್ದು, ಅವರಿಗೆ ಎಲ್ಲಾ ಸೌಲಭ್ಯ ನೀಡಲಾಗುವುದೆಂದು ಉಪನಿರ್ದೇಶಕರಾದ ವಿಶ್ವನಾಥ ಜಿಳ್ಳೆ ತಿಳಿಸಿದರು.
           ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಮಾತನಾಡಿ, ತಾಲ್ಲೂಕ ಪಂಚಾಯತ ಹಾಗೂ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅಂಗವಿಕಲರಿಗೆ ಶೇ.5% ಅನುದಾನ ಬಳಕೆಯಾಗುತ್ತಿದ್ದು, ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
           ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮೋತಿಲಾಲ ಮಾತನಾಡಿ, ಸ್ಥಳೀಯ ಸಂಸ್ಥೆಗಳಲ್ಲಿ 150 ಜನ ಅಂಗವಿಕಲರಿಗೆ ವಿವಿಧ ಯಂತ್ರೋಪಕರಣಗಳನ್ನು ನೀಡಲಾಗುತ್ತಿದೆ ಎಂದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
  

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!