ಕನ್ನಡ ವ್ಯಾಕರಣ
• ಸ್ವತಂತ್ರವಾಗಿ ಉಚ್ಚರಿಸಲ್ಪಡುವ ಅಕ್ಷರಗಳು ಸ್ವರಗಳು- *(13)*
• ಸ್ವರಗಳ ಜೊತೆಯಲ್ಲಿ ಕೂಡಿಕೊಂಡು ಹೋಗುವ ಅಕ್ಷರಗಳು ಯೋಗವಾಹಗಳು- *(2)*
• ಸ್ವರಗಳ ಸಹಾಯದಿಂದ ಉಚ್ಚರಿಸಲ್ಪಡುವ ಅಕ್ಷರಗಳು ವ್ಯಂಜನಗಳು- *(34)*
• ಏಕಮಾತ್ರಾ ಕಾಲದಲ್ಲಿ ಉಚ್ಚರಿಸುವ ಸ್ವರಾಕ್ಷರಗಳು ಹ್ರಸ್ವಸ್ವರಗಳು- *(6)*
• ಎರಡು ಮಾತ್ರಾಕಾಲದಲ್ಲಿ ಉಚ್ಚರಿಸಲ್ಪಡುವ ಸ್ವರಾಕ್ಷರಗಳು ದೀರ್ಘಸ್ವರಗಳು- *(7)*
• ಕಡಿಮೆ ಉಸಿರಿನಿಂದ ಉಚ್ಚರಿಸಲ್ಪಡುವ ಅಕ್ಷರಗಳು ಅಲ್ಪಪ್ರಾಣಗಳು- *(10)*
• ಹೆಚ್ಚು ಉಸಿರಿನಿಂದ ಉಚ್ಚರಿಸಲ್ಪಡುವ ಅಕ್ಷರಗಳು ಮಹಾಪ್ರಾಣಗಳು- *(10)*
• ನಾಸಿಕದ ಸಹಾಯದಿಂದ ಉಚ್ಚರಿಸುವ ಅಕ್ಷರಗಳು ಅನುನಾಸಿಕಗಳು- *(5)*
• ಒಂದು ವ್ಯಂಜನಕ್ಕೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಗುಣಿತಾಕ್ಷರ ಎಂದು ಕರೆಯುತ್ತಾರೆ.
*ಎರಡು ಅಥವಾ ಎರಡಕ್ಕಿಂತ ಹೆಚ್ಚು ವ್ಯಂಜನಗಳಿಗೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಸಂಯುಕ್ತಾಕ್ಷರ ಅಥವಾ ಒತ್ತಕ್ಷರ ಎಂದು ಕರೆಯಲಾಗುತ್ತದೆ.*
ಕನ್ನಡದ ಮೊದಲುಗಳು💛❤️
1. ಅಚ್ಚ ಕನ್ನಡದ ಮೊದಲ ದೊರೆ – ಮಯೂರವರ್ಮ
2. ಕನ್ನಡದ ಮೊದಲ ಕವಿ – ಪಂಪ
3. ಕನ್ನಡದ ಮೊದಲ ಶಾಸನ – ಹಲ್ಮಿಡಿ ಶಾಸನ
4. ತ್ರಿಪದಿ ಛಂದಸ್ಸಿನ ಮೊದಲ ಬಳಕೆ – ಬಾದಾಮಿಯ ಕಪ್ಪೆ ಅರಭಟ್ಟನ ಶಾಸನ
5. ಕನ್ನಡದ ಮೊದಲ ಲಕ್ಷಣ ಗ್ರಂಥ – ಕವಿರಾಜಮಾರ್ಗ
6. ಕನ್ನಡದ ಮೊದಲ ನಾಟಕ – ಮಿತ್ರವಿಂದ ಗೋವಿಂದ
7. ಕನ್ನಡದ ಮೊದಲ ಮಹಮದೀಯ ಕವಿ – ಶಿಶುನಾಳ ಷರೀಪ
8. ಕನ್ನಡದ ಮೊದಲ ಕವಯಿತ್ರಿ – ಅಕ್ಕಮಹಾದೇವಿ
9. ಕನ್ನಡದ ಮೊದಲ ಸ್ವತಂತ್ರ ಸಾಮಾಜಿಕ ಕಾದಂಬರಿ – ಇಂದಿರಾಬಾಯಿ
10. ಕನ್ನಡದ ಮೊದಲ ಪತ್ತೆದಾರಿ ಕಾದಂಬರಿ – ಚೊರಗ್ರಹಣ ತಂತ್ರ
11. ಕನ್ನಡದ ಮೊದಲ ಛಂದೋಗ್ರಂಥ – ಛಂದೋಂಬುಧಿ (ನಾಗವರ್ಮ)
12. ಕನ್ನಡದ ಮೊದಲ ಸಾಮಾಜಿಕ ನಾಟಕ – ಇಗ್ಗಪ್ಪ ಹೆಗ್ಗಡೆಯ ವಿವಾಹ ಪ್ರಹಸನ
13. ಕನ್ನಡದ ಮೊದಲ ಜ್ಯೋತಿಷ್ಯ ಗ್ರಂಥ – ಜಾತಕ ತಿಲಕ
14. ಕನ್ನಡದ ಮೊದಲ ಗಣಿತಶಾಸ್ತ್ರ ಗ್ರಂಥ – ವ್ಯವಹಾರ ಗಣಿತ
15. ಕನ್ನಡದ ಮೊದಲ ಕಾವ್ಯ – ಆದಿಪುರಾಣ
16. ಕನ್ನಡದ ಮೊದಲ ಗದ್ಯ ಕೃತಿ – ವಡ್ಡಾರಾಧನೆ
17. ಕನ್ನಡದಲ್ಲಿ ಮೊದಲು ಅಚ್ಚಾದ ಕೃತಿ – ಎ ಗ್ರಾಮರ್ ಆಫ್ ದಿ ಕನ್ನಡ ಲಾಂಗ್ವೇಜ್
18. ಕನ್ನಡದ ಮೊದಲ ಪತ್ರಿಕೆ – ಮಂಗಳೂರು ಸಮಾಚಾರ
19. ಹೊಸಗನ್ನಡದ ಶಬ್ದವನ್ನು ಮೊದಲು ಬಳಸಿದವರು – ಚಂದ್ರರಾಜ
20. ಕನ್ನಡದಲ್ಲಿ ಮೊದಲು ಕಥೆ ಬರೆದವರು – ಪಂಜೆಮಂಗೇಶರಾಯರು
21. ಕನ್ನಡದ ಮೊದಲ ಪ್ರೇಮಗೀತೆಗಳ ಸಂಕಲನ – ಒಲುಮೆ
22. ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷರು – ಹೆಚ್.ವಿ.ನಂಜುಂಡಯ್ಯ
23. ಕನ್ನಡದ ಮೊದಲ ಸ್ನಾತಕೋತ್ತರ ಪದವೀಧರ – ಆರ್.ನರಸಿಂಹಾಚಾರ್
24. ಕನ್ನಡದ ಮೊದಲ ವಚಚನಕಾರ – ದೇವರದಾಸಿಮಯ್ಯ
25. ಹೊಸಗನ್ನಡದ ಮೊದಲ ಮಹಾಕಾವ್ಯ – ಶ್ರೀರಾಮಾಯಣ ದರ್ಶನಂ
26. ಪಂಪಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ಕುವೆಂಪು
27. ಕನ್ನಡದ ಮೊದಲ ಕನ್ನಡ-ಇಂಗ್ಲೀಷ್ ನಿಘಂಟು ರಚಿಸಿದವರು – ಆರ್.ಎಫ್.ಕಿಟೆಲ್
28. ಕನ್ನಡದ ಮೊಟ್ಟಮೊದಲ ಸಮಕಲನ ಗ್ರಂಥ – ಸೂಕ್ತಿ ಸುಧಾರ್ಣವ
29. ಮೊದಲ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಸ್ಥಳ – ಬೆಂಗಳೂರು (1915)
30. ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಮೊದಲ ಕವಿ – ಕುವೆಂಪು
31. ಕನ್ನಡದ ಮೊದಲ ವಿಶ್ವಕೋಶ – ವಿವೇಕ ಚಿಂತಾಮಣಿ
32. ಕನ್ನಡದ ಮೊದಲ ವೈದ್ಯಗ್ರಂಥ – ಗೋವೈದ್ಯ
33. ಕನ್ನಡದ ಮೊದಲ ಪ್ರಾಧ್ಯಾಪಕರು – ಟಿ.ಎಸ್.ವೆಂಕಣ್ಣಯ್ಯ
34. ಕನ್ನಡದಲ್ಲಿ ರಚಿತಗೊಂಡ ಮೊದಲ ರಗಳೆ – ಮಂದಾನಿಲ ರಗಳೆ
35. ಕನ್ನಡದ ಮೊದಲ ಹಾಸ್ಯ ಪತ್ರಿಕೆ – ವಿಕಟ ಪ್ರತಾಪ
36. ಕನ್ನಡದ ಮೊದಲ ವೀರಗಲ್ಲು – ತಮ್ಮಟಗಲ್ಲು ಶಾಸನ
37. ಕನ್ನಡದ ಮೊದಲ ಹಾಸ್ಯ ಲೇಖಕಿ – ಟಿ.ಸುನಂದಮ್ಮ
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…