ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಅಗತ್ಯ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 309 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಬಿ.ಎಸ್ಸಿ ಪದವಿ ಅಥವಾ ಇಂಜಿನಿಯರಿಂಗ್ ಪದವಿ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ :
ಐಡಿಬಿಐ ಬ್ಯಾಂಕ್ ನೇಮಕಾತಿ 2025
ವಯೋಮಿತಿ :
ದಿನಾಂಕ 24 ಮೇ 2025ಕ್ಕೆ ಗರಿಷ್ಠ 27 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 ರಿಂದ ರೂ. 1,40,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ,COMPUTER BASED EXAMS) ನಡೆಸಿ ಅಭ್ಯರ್ಥಿಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ.
• ಉಳಿದ ಅಭ್ಯರ್ಥಿಗಳಿಗೆ – ರೂ. 1000
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 25, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 24, 2025
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…