ಜನಸ್ಪಂದನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ-ಸಚಿವ ರಹೀಂ ಖಾನ್
|

ಜನಸ್ಪಂದನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ-ಸಚಿವ ರಹೀಂ ಖಾನ್

ಬೀದರ.01.ಜುಲೈ.25:- ಇದ್ದ ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಬಗೆಹರಿಸುವ ಕರ್ನಾಟಕ ಸರ್ಕಾರದ ಜನಪ್ರಿಯ ಕಾರ್ಯಕ್ರಮವೇ ಜನಸ್ಪಂದನ ಕಾರ್ಯಕ್ರಮವಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು. ಅವರು ಮಂಗಳವಾರ ಜನವಾಡ ನಾಡ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನವಾಡ ಭಾಗದಲ್ಲಿ ಏನೇ ಸಮಸ್ಯೆಯಾಗಿರಲಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಇಲ್ಲೆ ಇದ್ದು ನೇರವಾಗಿ ಭೇಟಿ…

ನೀತಿ ನಿರೂಪಣೆಯಲ್ಲಿ ಅಂಕಿ ಸಂಖ್ಯೆಗಳ ಪಾತ್ರ ಬಹುಮುಖ್ಯ-ಕಿಶೋರ್ ಕುಮಾರ್ ದುಬೆ
|

ನೀತಿ ನಿರೂಪಣೆಯಲ್ಲಿ ಅಂಕಿ ಸಂಖ್ಯೆಗಳ ಪಾತ್ರ ಬಹುಮುಖ್ಯ-ಕಿಶೋರ್ ಕುಮಾರ್ ದುಬೆ

ಬೀದರ.01.ಜುಲೈ.25:- ಸರ್ಕಾರದ ನೀತಿ ನಿರೂಪಣೆಯಲ್ಲಿ ಅಂಕಿ ಸಂಖ್ಯೆಗಳ ಪಾತ್ರ ಬಹುಮುಖ್ಯವಾಗಿದ್ದು, ತೆರೆಮೆರೆಯಲ್ಲಿ ಕರ್ತವ್ಯ ನಿರ್ವಹಿಸುವ ಸಾಂಖ್ಯಿಕ ಇಲಾಖೆಯ ಪಾತ್ರ ಬಹುಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಕಿಶೋರ್ ಕುಮಾರ್ ದುಬೆ ತಿಳಿಸಿದರು. ಅವರು ಮಂಗಳವಾರ ಡಾ.ಪ್ರೊ.ಪಿ.ಸಿ.ಮಹಾಲ ನೋಬಿಸ್ ಸಾಂಖ್ಯಿಕ ತಜ್ಞರ ಇವರ ಜನ್ಮ ದಿನಾಚರಣೆ ಕಾರ್ಯಕ್ರಮ ನಿಮಿತ್ಯ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟಿçÃಯ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬೀದರ ವಿಶ್ವವಿದ್ಯಾಲಯದ ಕುಲಸಚಿವೆ ಸುರೇಖಾ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಯಶಸ್ಸು…

ಸಸ್ಯ ಸಂತೆ ಸಪ್ತಾಹ ಕಾರ್ಯಕ್ರಮಕ್ಕೆ ಡಾ.ಎಸ್.ವಿ.ಪಾಟೀಲ್ ಚಾಲನೆ
|

ಸಸ್ಯ ಸಂತೆ ಸಪ್ತಾಹ ಕಾರ್ಯಕ್ರಮಕ್ಕೆ ಡಾ.ಎಸ್.ವಿ.ಪಾಟೀಲ್ ಚಾಲನೆ

ಬೀದರ.01.ಜುಲೈ.25:- ನಾವು ಪರಿಸರದಿಂದ ಬಂದವರು, ಪರಿಸರವು ಪ್ರತಿಯೊಬ್ಬರ ಜೀವನಕ್ಕೂ ಬಹಳ ಮುಖ್ಯ, ಏಕೆಂದರೆ ಭೂಮಿಯ ಮೇಲಿನ ಜೀವನವು ಪರಿಸರದಿಂದ ಮಾತ್ರ ಸಾಧ್ಯ. ಎಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಎಸ್.ವಿ. ಪಾಟೀಲ ಹೇಳಿದರು. ಅವರು ಮಂಗಳವಾರ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಬೀದರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ ಇವರುಗಳ ಸಂಯುಕ್ತಾಶ್ರಯದಲ್ಲಿ ತೋಟಗಾರಿಕೆ ಮಹಾವಿದ್ಯಾಲಯದ ಮುಖ್ಯ ದ್ವಾರದ ಮುಂಭಾಗದಲ್ಲಿ ಜು.1 ರಿಂದ 5 ರವರೆಗೆ ಜರುಗಲಿರುವ “ಸಸ್ಯ ಸಂತೆ ಸಪ್ತಾಹ”…

ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳದಿದ್ದಲ್ಲಿ ಯಾವಪದವಿ ಗಳಿಸಿದರೂ ವ್ಯರ್ಥ-ಪ್ರೋ.ಜಗನ್ನಾಥ ಹೆಬ್ಬಾಳೆ
|

ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳದಿದ್ದಲ್ಲಿ ಯಾವ
ಪದವಿ ಗಳಿಸಿದರೂ ವ್ಯರ್ಥ-ಪ್ರೋ.ಜಗನ್ನಾಥ ಹೆಬ್ಬಾಳೆ

ಬೀದರ.01.ಜುಲೈ.25:- ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳದಿದ್ದಲ್ಲಿ ಯಾವ ಪದವಿ ಗಳಿಸಿದರೂ ವ್ಯರ್ಥ ಬೀದರ ವಿಶ್ವವಿದ್ಯಾಲಯದ ನಿವೃತ್ತ ಡೀನ್ ಪ್ರೋ. ಜಗನ್ನಾಥ ಹೆಬ್ಬಾಳೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇತ್ತೀಚಿಗೆ ತೋಟಗಾರಿಕೆ ಮಹಾವಿದ್ಯಾಲಯ ಬೀದರನಲ್ಲಿ ಹಮ್ಮಿಕೊಂಡಿದ್ದ 15ನೇ ತೋಟಗಾರಿಕೆ ಮಹಾವಿದ್ಯಾಲಯ ಮತ್ತು ವಸತಿ ನಿಲಯಗಳ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ತೋಟಗಾರಿಕಾ ಪದವಿಯು ಯಾವುದೇ ಪದವಿಗಿಂತ ಕಡಿಮೆ ಇಲ್ಲ, ಇದರಲ್ಲಿ ವಿಪುಲ ಉದ್ಯೋಗಾವಕಾಶಗಳಿದ್ದು, ವಿದ್ಯಾರ್ಥಿಗಳು ತೋಟಗಾರಿಕಾ ಪದವಿಯಲ್ಲಿ ಪಡೆದ ಜ್ಞಾನಾರ್ಜನೆಯು ರೈತರ ಸಹಾಯಕ್ಕಾಗಿ ಸದ್ಭಳಕೆಯಾಗಿ ಹೊರಹೊಮ್ಮಿದಲ್ಲಿ ತಂದೆ-ತಾಯಿ ಮತ್ತು ಗುರುಗಳ ಋಣ ತೀರಿಸಿದಂತಾಗುತ್ತದೆ….

ಇಂದು ಮತ್ತು ನಾಳೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳರಕ್ಷಣಾ ಆಯೋಗದ ಸದಸ್ಯರುಗಳ ಬೀದರ ಜಿಲ್ಲಾ ಪ್ರವಾಸ
|

ಇಂದು ಮತ್ತು ನಾಳೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ
ರಕ್ಷಣಾ ಆಯೋಗದ ಸದಸ್ಯರುಗಳ ಬೀದರ ಜಿಲ್ಲಾ ಪ್ರವಾಸ

ಬೀದರ.01.ಜುಲೈ.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಶಶಿಧರ್ ಕೋಸಂಬೆ, ಶೇಖರ್‌ಗೌಡ ಜಿ.ರಾಮತ್ನಾಳ್ ಹಾಗೂ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ಜುಲೈ.2 ಹಾಗೂ 3 ರಂದು ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.  ಅವರುಗಳು ಜುಲೈ.2 ರಂದು ಬೆಳಿಗ್ಗೆ 8 ಗಂಟೆಗೆ ಭಾಲ್ಕಿ ತಾಲ್ಲೂಕಿನಲ್ಲಿರುವ ಮಕ್ಕಳ ಪಾಲನಾ ಸಂಸ್ಥೆ, ವಸತಿ ನಿಲಯ, ಪೊಲೀಸ್ ಠಾಣೆ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 2 ರಿಂದ 2.30 ರವರೆಗೆ ಔರಾದ ತಾಲ್ಲೂಕಿನಲ್ಲಿರುವ…

ಕರಾಮುವಿ: ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
|

ಕರಾಮುವಿ: ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.01.ಜೂನ್.25:- ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ  NAAC A+  ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ, ಬೀದರದಲ್ಲಿ ಶೈಕ್ಷಣಿಕ ವರ್ಷ 2025-26ರ ಜುಲೈ ಆವೃತ್ತಿಯಲ್ಲಿ ಪ್ರಥಮ ವರ್ಷಕ್ಕೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಬಿ.ಎ/ಬಿ.ಕಾಂ /ಬಿ.ಎಸ್ಸಿ /ಬಿ.ಬಿ.ಎ /ಬಿ.ಸಿ.ಎ /ಬಿ.ಎಸ್.ಡಬ್ಲೂö್ಯ/ ಬಿ.ಲಿಬ್.ಐ.ಎಸ್ಸಿ / ಎಂ.ಎ /ಎಂ.ಎಸ್.ಡಬ್ಲೂö್ಯ /ಎಂ.ಕಾA /ಎಂ.ಸಿ.ಎ / ಎಂ.ಲಿಬ್.ಐ.ಎಸ್ಸಿ / ಎಂ.ಎಸ್ಸಿ /ಎಂ.ಬಿ.ಎ ಮತ್ತು ಯುಜಿ/ಪಜಿ/ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ…

ಮುಂಗಾರು ಹಂಗಾಮಿಗೆ ವಿವಿಧ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ
|

ಮುಂಗಾರು ಹಂಗಾಮಿಗೆ ವಿವಿಧ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ

ಕೊಪ್ಪಳ.01.ಜುಲೈ25: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 2025-26ನೇ ಸಾಲಿನ 124ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಮುಂಗಾರು ಹಂಗಾಮಿಗೆ ಜಲಾಶಯದಲ್ಲಿ ಲಭ್ಯವಾಗಬಹುದಾದ ನೀರಿನ ಪ್ರಮಾಣವನ್ನು ಅಂದಾಜಿಸಿ ವಿವಿಧ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿರುತ್ತದೆ. ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಜುಲೈ 2 ರಿಂದ ಜು….

ವಿಮೆ ಜಿಲ್ಲೆಯ ಎಲ್ಲಾ ರೈತರಿಗೆ ಮಾಡಲು ತಿಳಿಸಿ- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

ವಿಮೆ ಜಿಲ್ಲೆಯ ಎಲ್ಲಾ ರೈತರಿಗೆ ಮಾಡಲು ತಿಳಿಸಿ- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

ಕೊಪ್ಪಳ.01.ಜುಲ.25:- ಕೊಪ್ಪಳ ಜಿಲ್ಲೆಯಲ್ಲಿ ಈ ಸಲ ಮಳೆ ಆಶಾದಾಯವಾಗಿ ಕಂಡು ಬರುತ್ತಿಲ್ಲ ಹಾಗಾಗಿ ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆ ವಿಮೆ ಮಾಡಲು ತಿಳಿಸಬೇಕೆಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಕೃಷಿ ಇಲಾಖೆಯ ಜಂಟಿ ನಿರ್ದೆಶಕರಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಕೃಷಿ ಹಾಗೂ ಕೃಷಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಇಲ್ಲಿಯವರೆಗೆ ಸರಿಯಾಗಿ ಜಿಲ್ಲೆಯಲ್ಲಿ ಮಳೆಯಾಗಿಲ್ಲ ಮುಂದೆಯು ಹೀಗೆ ಆದರೆ ರೈತರಿಗೆ ಕಷ್ಟವಾಗುತ್ತದೆ. ರೈತರು ಬೆಳೆ…

ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
|

ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ.01.ಜುಲೈ.25: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ಅಧ್ಯಕ್ಷರಾದ ಬಾಲಚಂದ್ರನ್ ಎಸ್. ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಭಾಗ್ಯನಗರ ಪಟ್ಟಣ ಪಂಚಾಯತಿಯ ಸಭಾಂಗಣದಲ್ಲಿ ಜರುಗಿತು.       ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಿಡುಗಡೆಯಾಗುವ ಆಹಾರ ಧಾನ್ಯದ ಮಾಹಿತಿಯನ್ನು ಪಡಿತರ ಚೀಟಿದಾರರಿಗೆ ಹಾಗು ಗ್ಯಾರಂಟಿ ಸಮಿತಿ ಸದಸ್ಯರಿಗೆ ಮಾಹಿತಿ ನೀಡಬೇಕೆಂದು ಸದಸ್ಯರು ತಿಳಿಸಿದರು. ಸದಸ್ಯೆ ಜ್ಯೋತಿ ಗೊಂಡಬಾಳ ಮಾತನಾಡಿ, ಸಾರ್ವಜನಿಕರಿಗೆ ಆಹಾರ ಧಾನ್ಯದ ಬಗ್ಗೆ ವ್ಯಾಪಕ…

ಭಾಗ್ಯನಗರ ಪ.ಪಂ.: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
|

ಭಾಗ್ಯನಗರ ಪ.ಪಂ.: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕೊಪ್ಪಳ.01.ಜುಲೈ.25: ಭಾಗ್ಯನಗರ ಪಟ್ಟಣ ಪಂಚಾಯತಿಯ 2022-23ನೇ ಸಾಲಿನ ಪಟ್ಟಣ ಪಂಚಾಯತ ಅನುದಾನದಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪಟ್ಟಣ ಪಂಚಾಯತಿಯ ಶೇ.24.10 ರ ಯೋಜನೆಯ ಎಸ್.ಎಫ್.ಸಿ ಮುಕ್ತನಿಧಿ ಎಸ್‌ಸಿಪಿ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮ ಯೋಜನೆಯಡಿ ಪರಿಶಿಷ್ಟ ಜಾತಿ ಜನಾಂಗದ ಹಾಗೂ ಶೇ.24.10ರ ಯೋಜನೆಯ ಎಸ್.ಎಫ್.ಸಿ ಮುಕ್ತನಿಧಿ ಶೇ.7.25ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿ ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ  ಸಹಾಯಧನ ನೀಡಲಾಗುತ್ತದೆ. ಸೌಲಭ್ಯ ಪಡೆಯಲು ಫಲಾನುಭವಿಗಳು ಕಡ್ಡಾಯವಾಗಿ 5 ವರ್ಷಕ್ಕಿಂತ ಹೆಚ್ಚಾಗಿ ಪಟ್ಟಣದಲ್ಲಿ…