ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
|

ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು.19.ಆಗಸ್ಟ್.25:- ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ವಿವಿಧ ಯೋಜನೆಗಳ ಸಲ ಸೌಲಭ್ಯಕೆ ಅರ್ಜಿ ಆಹ್ವಾನ. ಭೂ ಒಡೆತನ ಯೋಜನೆ, ಸೇರಸಾಲ ಯೋಜನೆ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. 2023-24 , 2024-25 ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ.

ಡಾ. ಸಿದ್ದಾರೆಡ್ಡಿ ಅವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತ್ತು.
|

ಡಾ. ಸಿದ್ದಾರೆಡ್ಡಿ ಅವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತ್ತು.

ಸಂತಪುರ.19.ಆಗಸ್ಟ್.25:- ನೂತನವಾಗಿ ಸಂತಪುರ ಆಸ್ಪತ್ರೆಗೆ ಆಗಮಿಸಿರುವ ಡಾ. ಸಿದ್ದಾರೆಡ್ಡಿ ಅವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತ್ತು ಬಳಿಕ ಮಾತನಾಡಿದ ತುಕಾರಾಮ ಹಸನ್ಮುಖಿ ಆರೋಗ್ಯ ಸೇವೆ ಎಂದರೆ ಮಾನವೀಯತೆಗೂ, ಸಮಾಜ ಸೇವೆಗೂ ಸಮಾನ ನಮ್ಮ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ನಿಮ್ಮಂತಹ ಜ್ಞಾನ, ಅನುಭವ ಹಾಗೂ ಸೇವಾ ಮನೋಭಾವವುಳ್ಳ ವೈದ್ಯರು ಸಂತಪುರ ಆಸ್ಪತ್ರೆಗೆ ಆಗಮಿಸಿರುವುದು ನಮಗೆ ಸಂತಸದ ವಿಷಯ ಎಂದರು ಇದೆ ವೇಳೆ ಭೀಮವಾದ ದಸಂಸ ತಾಲೂಕು ಸಂಚಾಲಕ ತುಕಾರಾಮ ಹಸನ್ಮುಖಿ, ಮಲ್ಲಿಕಾರ್ಜುನ ಜೋನ್ನೇಕೆರಿ, ಕಾಶೀನಾಥ…

ಸಹಾಯಕ ಪ್ರಾಧ್ಯಾಪಕರಿಗೆ UGC ವೇತಣಿ ಶ್ರೇಣಿ ಆದೇಶ
|

ಸಹಾಯಕ ಪ್ರಾಧ್ಯಾಪಕರಿಗೆ UGC ವೇತಣಿ ಶ್ರೇಣಿ ಆದೇಶ

ಬೆಂಗಳೂರು.19.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ಪ್ರಾಧ್ಯಾಪಕರಿಗೆ ಸಿ.ಎ.ಎಸ್ ಯೋಜನೆ ಅಡಿಯಲ್ಲಿ 2018ರ ಯುಜಿಸಿ ನಿಯಮಗಳ ಅನ್ವಯ ಶೈಕ್ಷಣಿಕ ಹಂತ 11 ರ ವೇತನ ಶ್ರೇಣಿ ರೂ.68900-205500 ರಲ್ಲಿ ಸ್ಥಾನೀಕರಣ ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅರ್ಹ ಸಹಾಯಕ ಪ್ರಾಧ್ಯಾಪಕರಿಗೆ 2016 ರ ಪರಿಷ್ಕೃತ ಯುಜಿಸಿ ವೇತನ ಶ್ರೇಣಿಯನ್ನು ಉಲ್ಲೇಖ (1) ಹಾಗೂ (2) ರ…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
|

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಫರಂಗಿಪೇಟೆ ಮೌಲಾನ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜು ಇಲ್ಲಿಗೆ ಭೌತಶಾಸ್ತ್ರ ಹಾಗೂ ಆಂಗ್ಲ ಭಾಷಾ ವಿಜ್ಞಾನ ವಿಭಾಗಕ್ಕೆ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿ.ಇಡಿ ಪೂರ್ಣಗೊಳಿಸಿರಬೇಕು. ಮಾಸಿಕ: 14,000 ಗೌರವಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9742972679 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ…

ಆಡಳಿತ ನ್ಯಾಯಾಧಿಕರಣ ತರಬೇತಿಗೆ ಅರ್ಜಿ ಆಹ್ವಾನ
|

ಆಡಳಿತ ನ್ಯಾಯಾಧಿಕರಣ ತರಬೇತಿಗೆ ಅರ್ಜಿ ಆಹ್ವಾನ

2025-26ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧಿಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ತರಬೇತಿಯ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧಿಕರಣ ತರಬೇತಿ ಅವಧಿ ಎರಡು ವರ್ಷ ನೀಡಲಾಗುವದು ಮಾಸಿಕ ಶಿಷ್ಯ ವೇತನ: ಅಭ್ಯರ್ಥಿಗಳಿಗೆ ಮಾಸಿಕ ಆದಾಯ 10,000 ಶಿಷ್ಯ ವೇತನ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. 40 ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ…

ಆಗಸ್ಟ್ 26 ರಂದು ತುಂಗಭದ್ರಾ ಆರತಿ ಉತ್ಸವ ಆಚರಣೆಗೆ ನಿರ್ಧಾರ: ಸಂಸದ ರಾಜಶೇಖರ ಹಿಟ್ನಾಳ
|

ಆಗಸ್ಟ್ 26 ರಂದು ತುಂಗಭದ್ರಾ ಆರತಿ ಉತ್ಸವ ಆಚರಣೆಗೆ ನಿರ್ಧಾರ: ಸಂಸದ ರಾಜಶೇಖರ ಹಿಟ್ನಾಳ

ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ವಿಶೇಷ ಕಾರ್ಯಕ್ರಮ ಕೊಪ್ಪಳ.18.ಆಗಸ್ಟ.25: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಗಸ್ಟ್ 26 ರಂದು ತುಂಗಭದ್ರಾ ನದಿ ತೀರದಲ್ಲಿ ತುಂಗಭದ್ರಾ ಆರತಿ ಉತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಕೊಪ್ಪಳ ಸಂಸದರಾದ ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು. ಅವರು ರವಿವಾರದಂದು ಕೊಪ್ಪಳ ತಾಲ್ಲೂಕಿನ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಕಛೇರಿ ಸಭಾಂಗಣದಲ್ಲಿ ಕರೆದ ಶ್ರೀ ಕ್ಷೇತ್ರ ಹುಲಿಗಿಯ…

ಗಣೇಶೋತ್ಸವ : ಕ್ಷೇತ್ರ ಭೇಟಿ ಕೈಗೊಂಡು ಭದ್ರತಾ ಕ್ರಮಗಳನ್ನು ಪರಿಶೀಲಿಸಿದ ಆಯುಕ್ತ ಜುಬಿನ್ ಮೊಹಪಾತ್ರ
|

ಗಣೇಶೋತ್ಸವ : ಕ್ಷೇತ್ರ ಭೇಟಿ ಕೈಗೊಂಡು ಭದ್ರತಾ ಕ್ರಮಗಳನ್ನು ಪರಿಶೀಲಿಸಿದ ಆಯುಕ್ತ ಜುಬಿನ್ ಮೊಹಪಾತ್ರ

ರಾಯಚೂರು.18.ಆಗಸ್ಟ್.25: ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಆಗಸ್ಟ್ 17ರಂದು ರಾಯಚೂರು ನಗರದಲ್ಲಿ ಕ್ಷೇತ್ರ ಭೇಟಿ ನಡೆಸಿ ಗಣೇಶೋತ್ಸವದ ಸಿದ್ಧತಾ ಕ್ರಮಗಳನ್ನು ಖುದ್ದು ಪರಿಶೀಲಿಸಿದರು. ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣಪತಿ ಹಬ್ಬದ ಸಿದ್ಧತೆಗಾಗಿ ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಕ್ಷೇತ್ರ ಭೇಟಿ ನಡೆಸಿ ವಿವಿಧ ಭದ್ರತಾ ಕ್ರಮಗಳು ಮತ್ತು ಸಂಚಾರ ವ್ಯವಸ್ಥೆಯ ಬಗ್ಗೆ ಚರ್ಚಿಸಿದರು.ಗಣೇಶೋತ್ಸವ ಸಂದರ್ಭದಲ್ಲಿ ವಿಸರ್ಜನಾ ಮಾರ್ಗ, ಅಗತ್ಯವಿರುವ ರಸ್ತೆ ಕಾಮಗಾರಿಗಳು, ವಿದ್ಯುತ್ ತಂತಿಗಳು ಮತ್ತು…

ವೈಭವದಿಂದ ಜರುಗಿದ ಶ್ರೀ ಅಂದಿಗಾಲೀಶ ಜಾತ್ರೆ
|

ವೈಭವದಿಂದ ಜರುಗಿದ ಶ್ರೀ ಅಂದಿಗಾಲೀಶ ಜಾತ್ರೆ

ಕೊಪ್ಪಳ.18.ಆಗಸ್ಟ್.25: ಜಿಲ್ಲೆಯ ಅಗಳಕೇರಿ-ಶಹಪುರ-ಶಿವಪುರ ಪರಿ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಅಂದಿಗಾಲೀಶ ಸ್ವಾಮಿ ಜಾತ್ರೆಯು ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಶ್ರಾವಣ ಮಾಸದ ನಾಲ್ಕನೇ ಶನಿವಾರದಂದು ಶ್ರದ್ಧಾಭಕ್ತಿಯಿಂದ ನೆರವೇರಿತು.  ಪ್ರತಿವರ್ಷ ಶ್ರಾವಣ ಮಾಸದ ಕೊನೆ ಶನಿವಾರ ಅಂದಿಗಾಲೀಶ ಸ್ವಾಮಿಯ ಜಾತ್ರೆ ನಡೆಯುವುದು ವಾಡಿಕೆ. ಈ ಬಾರಿ ಶ್ರಾವಣ ಮಾಸದಲ್ಲಿ ಐದು ಶನಿವಾರಗಳು ಬಂದಿದ್ದರಿoದ ಮತ್ತು ಐದನೇ ಶನಿವಾರ ಅಮಾವಾಸ್ಯೆ ಇರುವುದರಿಂದ ನಾಲ್ಕನೇ ಶನಿವಾರದಂದು ಸದ್ಭಕ್ತರು ಶ್ರೀ ಅಂದಿಗಾಲೀಶ ಜಾತ್ರೆಯನ್ನು ಅಯೋಜಿಸಿದ್ದರು. ಗುಡ್ಡದಲ್ಲಿ ಅಗಳಕೇರಿ-ಶಹಪುರ-ಶಿವಪುರ ಮತ್ತಿತರೆ ಹಲವಾರು ಗ್ರಾಮಗಳ ದೈವಸ್ಥರ…

ಖಾಯಂ ಜನತಾ ನ್ಯಾಯಾಲಯದ ಮೊರೆ ಹೋಗಲು ಕರೆ- ನ್ಯಾ. ಸದಾನಂದ ನಾಗಪ್ಪ ನಾಯಕ್
|

ಖಾಯಂ ಜನತಾ ನ್ಯಾಯಾಲಯದ ಮೊರೆ ಹೋಗಲು ಕರೆ- ನ್ಯಾ. ಸದಾನಂದ ನಾಗಪ್ಪ ನಾಯಕ್

ಕೊಪ್ಪಳ.18.ಆಗಸ್ಟ್.25: ಸಾರ್ವಜನಿಕರು ಪ್ರಕರಣಗಳನ್ನು ದಾಖಲಿಸಿದಾಗ ವಿಳಂಬವಾಗುವುದನ್ನು ತಡೆಯಲು ಖಾಯಂ ಜನತಾ ನ್ಯಾಯಾಲಯದ ಮೋರೆ ಹೋಗಲು ಗಂಗಾವತಿಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್ ಅವರು ಮಾಜಿ ದೇವದಾಸಿ ಮಹಿಳೆಯರಿಗೆ ಕರೆ ನೀಡಿದರು. ಅವರು ಶನಿವಾರ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಗಂಗಾವತಿ ತಾಲೂಕ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ…

ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಆ. 22ರೊಳಗೆ ದಾಖಲಾತಿ ಪರಿಶೀಲಿಸಿಕೊಳ್ಳಿ
|

ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಆ. 22ರೊಳಗೆ ದಾಖಲಾತಿ ಪರಿಶೀಲಿಸಿಕೊಳ್ಳಿ

ಕೊಪ್ಪಳ.18.ಆಗಸ್ಟ್.25: ಪಿಎಂ ಅಭಿಮ್ ಹಾಗೂ ಎನ್.ಹೆಚ್.ಎಂ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಆಗಸ್ಟ್ 22 ರೊಳಗೆ ಮೂಲ ದಾಖಲಾತಿ ಪರಿಶೀಲಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಪಿಎಂ ಅಭಿಮ್ ಹಾಗೂ ಎನ್.ಹೆಚ್.ಎಂ ಅಡಿಯಲ್ಲಿ ಶುಶ್ರೂಷಣಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಜುಲೈ 29 ರಂದು ವೆಬ್‌ಸೈಟ್ www.koppal.nic.in ನಲ್ಲಿ ಪ್ರಕಟಿಸಲಾಗಿತ್ತು. ಈ ತಾತ್ಕಾಲಿಕ ಆಯ್ಕೆ…