ದಿನಾಂಕ 07.06.2025 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಚಾಮರಾಜಪೇಟೆ 1ನೆ ಮುಖ್ಯರಸ್ತೆಯ BBMP ಆಟದಮೈದಾನ ಹಾಗೂ B B ಜಂಕ್ಷನ್ ನಲ್ಲಿ ಪ್ರಾರ್ಥನೆ ನಡೆಯುವುದರಿಂದ ಮೈಸೂರುರಸ್ತೆಯ BGS ಪ್ಲೈಓವರ್ ಬೆಳಿಗ್ಗೆ 8:00 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ತಾತ್ಕಾಲಿಕವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇದಿಸಲಾಗುವುದು.
ಪ್ರತಿ ವರ್ಷದಂತೆ ಬೆಂಗಳೂರು ನಗರದ ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಮೈಸೂರು ರಸ್ತೆಯ ಬಿ.ಬಿ ಜಂಕ್ಷನ್ ಹತ್ತಿರದ ಮಸೀದಿ ಮತ್ತು ಚಾಮರಾಜಪೇಟೆ 1ನೇ ಮುಖ್ಯ ರಸ್ತೆಯ 7ನೇ ಅಡ್ಡರಸ್ತೆ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ದಿನಾಂಕ: 07.06.2025 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲು ಅಪಾರ ಸಂಖ್ಯೆಯಲ್ಲಿ ಸೇರುವುದರಿಂದ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಕೆಳಕಂಡಂತೆ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ.
ದಿನಾಂಕ: 07.06.2025 ರಂದು ಬೆಳಿಗ್ಗೆ 08-00 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ
1) ಮೈಸೂರು ರಸ್ತೆಯ ಟೋಲ್ಗೇಟ್ ಜಂಕ್ಷನ್ ನಿಂದ ಬಿಬಿ ಜಂಕ್ಷನ್ ಮೂಲಕ ಬಿಜಿಎಸ್ ಫೈಓವರ್ ಮೇಲ್ಬಾಗದಿಂದ ಟೌನ್ಹಾಲ್ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಮೈಸೂರು ಕಡೆಯಿಂದ ಟೌನ್ಹಾಲ್ ಕಡೆಗೆ ಹೋಗುವ ವಾಹನಗಳು ಬ್ಯಾಟರಾಯನಪುರ ಸಂಚಾರ ಠಾಣಾ ಸರಹದ್ದಿನ ಕಿಮ್ಮೊ ಜಂಕ್ಷನ್ನಲ್ಲಿ ಎಡತಿರುವು ಪಡೆದುಕೊಂಡು ವಿಜಯನಗರ ಮೂಲಕ ಸಾಗಬಹುದು.
2) ಟೌನ್ಹಾಲ್ ಕಡೆಯಿಂದ ಮೈಸೂರು ಕಡೆಗೆ ಬಿಜಿಎಸ್ ಫೈಓವರ್ ಮೇಲ್ಬಾಗದಿಂದ ಬಿಬಿ ಜಂಕ್ಷನ್ ಮಾರ್ಗವಾಗಿ ಟೋಲ್ಗೇಟ್ ಜಂಕ್ಷನ್ ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಟೌನ್ಹಾಲ್ ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳು ಬಿಜಿಎಸ್ ಪ್ರೈಓವರ್ ಕೆಳಗಡೆ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ಭಾರಿ ವಾಹನಗಳು ವೆಟರ್ನರಿ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಗೂಡ್ ಶೆಡ್ ರಸ್ತೆ ಮೂಲಕ ಮತ್ತು ಲಘುವಾಹನಗಳು ಸಿರಸಿ ಜಂಕ್ಷನ್ನಲ್ಲಿ ಬಲ ತಿರುವು ಪಡೆದುಕೊಂಡು ಜೆ.ಜೆ ನಗರ-ಟ್ಯಾಂಕ್ ಬಂಡ್ ರಸ್ತೆ – ಬಿನ್ನಿಮಿಲ್ ಜಂಕ್ಷನ್- ಹುಣಸೇಮರ ಮೂಲಕ ಸಾಗುವುದು.
3) ಬಸವನಗುಡಿ & ಚಾಮರಾಜಪೇಟೆ ಕಡೆಯಿಂದ ಮೆಜೆಸ್ಟಿಕ್ ಕಡೆಗೆ ಹೋಗುವಂತಹ ವಾಹನಗಳು ಚಾಮರಾಜಪೇಟೆ 1 ನೇ ಮುಖ್ಯರಸ್ತೆ, 5ನೇ ಅಡ್ಡ ರಸ್ತೆ ಮೂಲಕ ಮೈಸೂರು ರಸ್ತೆ, ಸಿರ್ಸಿ ಸರ್ಕಲ್, ಬಿನ್ನಿಮಿಲ್ ರಸ್ತೆಯ ಮೂಲಕ ಸಾಗುವುದು ಇದಕ್ಕೆ ಸಾರ್ವಜನಿಕರು ಸಂಚಾರ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.
ಇದಕ್ಕೆ ಸಾರ್ವಜನಿಕರು ಸಂಚಾರ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.
ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…
ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…
ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…
ಫ್ರೆಂಚ್ ಓಪನ್ ಟೆನಿಸ್ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…
"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…
ಭಾರತದ ಮೇಲಿನ ಯಾವುದೇ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡಲಾಗುವುದು ಮತ್ತು ಭಯೋತ್ಪಾದಕರು ಮತ್ತು ಅವರ ಅಪರಾಧಿಗಳ ನಡುವೆ ಯಾವುದೇ ವ್ಯತ್ಯಾಸವನ್ನು…