ಹರಿಯಾಣದಲ್ಲಿ ನಡೆದ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಇಂದು ಸತತ ಮೂರನೇ ದಿನವೂ ರಾಬರ್ಟ್ ವಾದ್ರಾ ಅವರನ್ನು ವಿಚಾರಣೆಗೆ ಒಳಪಡಿಸಿದೆ. ನವದೆಹಲಿಯ ED ಕಚೇರಿಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಈ ಪ್ರಕರಣವು ಶ್ರೀ ವಾದ್ರಾ ಅವರ ಕಂಪನಿಯಿಂದ ಗುರುಗ್ರಾಮ್ನಲ್ಲಿ ಭೂಮಿ ಖರೀದಿಗೆ ಸಂಬಂಧಿಸಿದೆ.
