Govt.F.G ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಉದ್ಘಾಟನೆ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ

ಕಲಬುರಗಿ.28.ಮಾರ್ಚ್.25:ಕಮಲಾಪುರ ಸರ್ಕಾರಿ ಪದವಿ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಉದ್ಘಾಟನೆ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಜಾನಪದ ಉತ್ಸವವನ್ನು ಆಯೋಜಿಸಲಾಗಿತ್ತು.

ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನ ಪ್ರಾಚಾರ್ಯರು, ಪ್ರಾಧ್ಯಾಪಕರು ಬಂಡಿಯಲ್ಲಿ ಕುಳಿತುಕೊಂಡು ಕಾಲೇಜಿಗೆ ಬಂದರು

ವಿದ್ಯಾರ್ಥಿಗಳು ಹಲಗೆ ಬಾರಿಸುತ್ತಾ, ನೃತ್ಯ ಮಾಡುತ್ತಾ ಅತಿಥಿಗಳನ್ನು ಸಭಾಭವನಕ್ಕೆ ಕರೆತಂದರು. ಕಾಲೇಜಿನ ಆವರಣದಲ್ಲಿ ಬಾಳೆಗೊನೆ, ಕಬ್ಬು, ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಕುಟ್ಟುವ, ಬೀಸುವ ಮತ್ತು ಅಡಕಲ ಗಡಗಿಗಳ ಮೇಲೆ ದೀಪಾಲಂಕಾರ ಮಾಡಲಾಗಿತ್ತು. ಅನೇಕ ಸಾಮಗ್ರಿಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ಮಾಲಿಪಾಟೀಲ, ‘ಜನಪದವು ಯಾವಾಗ ಹುಟ್ಟಿಕೊಂಡಿತು ಎಂದು ನಿಖರವಾದ ಇತಿಹಾಸವಿಲ್ಲ. ಮನುಜನ ಅರಿವಿನ ಉಗಮದೊಂದಿಗೆ ಜನಪದ ಬೆಳೆದು ಬಂದಿದೆ. ಜನರು ತಮ್ಮ ದಿನ ನಿತ್ಯದ ಕಾಯಕದೊಂದಿಗೆ ಹಾಡು, ಕುಣಿತ, ಸಾಹಿತ್ಯ, ಕಲೆ, ಆಟ, ಬಯಲಾಟ, ನಾಟಕಗಳ ಮೂಲಕ ತಮ್ಮ ಸಂಭ್ರಮವನ್ನು ಬಹು ಸಡಗರದಿಂದ ಆಚರಿಸಿಕೊಂಡು ಬಂದಿರುವ ಈ ಕಲೆಗಳೇ ಜಾನಪದವೆಂದು ಹೇಳುತ್ತೇವೆ.

ಜಾನಪದವು ಜನವಾಣಿ ಬೇರು ಕವಿವಾಣಿ ಹೂವು ಎಂದು ಬಿ.ಎಂ.ಶ್ರೀಯವರು ಹೇಳಿದ್ದಾರೆ. ಜಾನಪದವು ಎಲ್ಲಾ ಸಾಹಿತ್ಯ, ಸಂಗೀತ, ಕಲೆಗಳ ತಾಯಿ ಬೇರಾಗಿದೆ’ ಎಂದು ಹೇಳಿದರು.

ನಿವೃತ್ತ ಶಿಕ್ಷಕ ಗುರುಲಿಂಗಪ್ಪ ಚಿರಡಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಪ್ರೊ. ಅಮೃತಾ ಕಟಕೆ ‘ಜನಪದವೇ ನಮ್ಮಉಸಿರು, ನಮ್ಮ ಸಂಸ್ಕೃತಿ, ಸಂಪ್ರದಾಯ ಇದನ್ನು ಸದಾ ನಾವು ಆಚರಿಸಬೇಕಾಗಿದೆ. ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕಾಗಿದೆ’ ಎಂದರು.

ಎಲ್ಲ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ರೇಷ್ಮೆ ಅಂಗಿ, ಪಂಚೆ, ಇಳಕಲ್ ಸೀರೆ ಧರಿಸಿಕೊಂಡು ಬಂದಿದ್ದರು.

ಪ್ರಾಧ್ಯಾಪಕರಾದ ಜಗದೇವಪ್ಪ ಧರಣಿ, ಫಾತಿಮಾ ಹಸನ್ನತ್, ಮಹಮ್ಮದ್ ಯೂಸೂಫ್, ಜ್ಯೋತಿ ಕಿರಣಗಿ, ಗೌಶೀಯಾ ಬೇಗಂ, ಗಿರೀಶ, ಶ್ರವಣಕುಮಾರಿ, ಅಂಬಣ್ಣ, ಸತ್ತೇಶ್ವರ ಚೌಧರಿ, ಪ್ರೊ.ನೀತಾ ಭೋಸ್ಲೆ, ಖಾಜಿ ಪರವಿನ್, ಶಾಮರಾವ್, ಮಹಾಂತೇಶ, ಸಫಿಯಾ ಬೇಗಂ, ನುಜುತ್ ಪರವೀನ್, ಅವಿನಾಶ ಕಂಠಿಕರ, ರವೀಂದ್ರ ಕುಂಬಾರ, ಲಕ್ಷ್ಮಣ, ಮಾಣಿಕ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

5 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

6 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

6 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

6 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

6 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

6 hours ago