HOME GUARD, ಗೃಹರಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಗೃಹರಕ್ಷಕರ ಸ್ವಯಂಸೇವಕ ಸ್ಥಾನಗಳನ್ನು ಭರ್ತಿ ಮಾಡಲು ಸಂಡೂರು, ಸಿರುಗುಪ್ಪ, ಕುರುಗೋಡು, ಕುಡುತಿನಿ, ತೆಕ್ಕಲಕೋಟೆ, ಮತ್ತು ತೋರಣಗಲ್ಲು ಘಟಕಗಳಲ್ಲಿ ಖಾಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆಯು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು 19 ವರ್ಷಗಳು ತುಂಬಿರಬೇಕು ಹಾಗೂ 40 ವರ್ಷಗಳು ಮೀರಿರಬಾರದು. ಸಂಡೂರು, ಕುಡುತಿನಿ, ತೆಕ್ಕಲಕೋಟೆ, ತೋರಣಗಲ್ಲು, ಕುರುಗೋಡು ಮತ್ತು ಸಿರುಗುಪ್ಪ ಘಟಕಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಘಟಕದ 10 ಕಿ.ಮೀ. ವ್ಯಾಪ್ತಿಯೊಳಗೆ ವಾಸವಾಗಿರಬೇಕು. ಈ ಬಗ್ಗೆ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯಲ್ಲಿ ಸ್ಥಳೀಯ ವಿಳಾಸದ ಮಾಹಿತಿ ಹೊಂದಿರಬೇಕು.

ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ವರ್ಗಾವಣೆ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿಯನ್ನು ಲಗತ್ತಿಸುವುದು. ಆಯ್ಕೆ ವಿಧಾನ ದೈಹಿಕ ಸಾಮರ್ಥ್ಯ, ಮೌಖಿಕ ಸಂದರ್ಶನ ಕೈಗೊಳ್ಳಲಾಗುತ್ತದೆ. ಪುರುಷ ಅಭ್ಯರ್ಥಿಯ ಎತ್ತರ 168 ಸೆ.ಮೀ ಮತ್ತು ತೂಕ ಕನಿಷ್ಠ 50 ಕೆ.ಜಿ ಹೊಂದಿರಬೇಕು. ಅಭ್ಯರ್ಥಿಯು ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು. ಅಭ್ಯರ್ಥಿಯು ಯಾವುದೇ ರಾಜಕೀಯ ಪಕ್ಷಗಳಲ್ಲಿ ತೊಡಗಿರಬಾರದು.

ಗೃಹರಕ್ಷಕರ ಹುದ್ದೆಯು ಸ್ವಯಂ ಸೇವಕ ಹುದ್ದೆಯಾಗಿದ್ದು, ಯಾವುದೇ ಸಂಬಳವಿರುವುದಿಲ್ಲ. ಭರ್ತಿಯಾದ ಗೃಹರಕ್ಷಕನು ಸ್ವಯಂ ಸೇವಕ ಗೃಹರಕ್ಷಕನಾಗಿರುತ್ತಾನೆಯೇ ಹೊರತು ಸರ್ಕಾರಿ ನೌಕರ ಅಥವಾ ಸಿಬ್ಬಂದಿಯಾಗಿರುವುದಿಲ್ಲ. ವಿಶೇಷ ಕೌಶ್ಯಲತೆ ಹೊಂದಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು (ಡ್ರೈವಿಂಗ್, ಎಲೆಕ್ಟಿçಷಿಯನ್, ಕಂಪ್ಯೂಟರ್ ಆಪರೇಟರ್, ಪೇಂಟರ್ ಮತ್ತು ಜಿಲ್ಲಾ ಮಟ್ಟ, ರಾಜ್ಯ ಮಟ್ಟ, ಮತ್ತು ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಪ್ರಾಥಮಿಕ ಆದ್ಯತೆ ನೀಡಲಾಗುವುದು).

ಸಂಡೂರು, ಕುಡುತಿನಿ, ತೆಕ್ಕಲಕೋಟೆ, ತೋರಣಗಲ್ಲು, ಕುರುಗೋಡು ಮತ್ತು ಸಿರುಗುಪ್ಪ ಘಟಕಗಳಲ್ಲಿ ಸೇರಬಯಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮoದಿರದ ಗೃಹರಕ್ಷಕ ದಳದ ಕಚೇರಿಯಲ್ಲಿ ನೀಡಲಾಗುವುದು.

ಸೂಚನೆ: ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಪಾರತೋಷಕ ನೀಡುವುದು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ, ಈ ದಿಶೆಯಲ್ಲಿ ಮಧ್ಯವರ್ತಿಗಳ ಭರವಸೆಗಳಿಗೆ ಮಾರು ಹೋಗಬಾರದೆಂದು ಈ ಮೂಲಕ ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.7975872247 ಮತ್ತು ದೂ.08392-276421 ಗೆ ಸಂಪರ್ಕಿಸಬಹುದು ಎಂದು ಗೃಹರಕ್ಷಕರ ಆಯ್ಕೆ ಸಮಿತಿಯ ಸಮಾದೇಷ್ಟರು ಹಾಗೂ ಸದಸ್ಯ-ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿಗಳನ್ನು ಏ.17 ರಿಂದ 29 ರ ವರೆಗೆ ಬೆಳಿಗ್ಗೆ 09 ಗಂಟೆಯಿAದ 12 ಗಂಟೆಯವರೆಗೆ ಮಾತ್ರ ನೀಡಲಾಗುವುದು (ರಜಾ ದಿನಗಳನ್ನು ಹೊರತು ಪಡಿಸಿ).

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

7 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

8 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

8 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

8 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

8 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

8 hours ago