17 ಡಿಸೆಂಬರ್ 24.ಬೆಂಗಳೂರು:- ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಸಂಬಂಧಿಸಿದಂತೆ 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿ ಪ್ರಾಧಿಕಾರ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆಗಳು objection ಇದ್ದಲ್ಲಿ ಡಿ.19ರ ಮಧ್ಯಾಹ್ನ 12.30 pm ರೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ಬೇಕಾಗಿದೆಮಾಹಿತಿ www.prajaprabhat.com ಗೆ ಮಾಹಿತಿ ಲಭ್ಯವಾಗಿದೆ.
ದಿನಾಂಕ 24.11.2024 ರಂದು ಪ್ರಾಧಿಕಾರದಿಂದ ನಡೆಸಿದ ಕೆಸೆಟ್-2024 ಪರೀಕ್ಷೆಗೆ ಸಂಬಂಧಿಸಿದಂತೆ, ಒಟ್ಟು 41 ವಿಷಯಗಳ ಕೀ ಉತ್ತರಗಳನ್ನು ಪ್ರಕಟಿಸಿ ದಿನಾಂಕ 29.11.2024 ರವರೆಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.
ಪ್ರಕಟಿತ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ದಿನಾಂಕ 13.12.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಂತಿಮ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಒದಗಿಸಲಾದ ಲಿಂಕ್ ಮೂಲಕ ದಿನಾಂಕ: 19.12.2024 ಮಧ್ಯಾಹ್ನ 12.30 ರೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಪೂರಕ ದಾಖಲೆಗಳಿಲ್ಲದೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಕೆ-ಸೆಟ್ ಪರೀಕ್ಷೆಗೆ ಶೇ. 84ರಷ್ಟು ಅಭ್ಯರ್ಥಿಗಳು ಹಾಜರು
ಕೆ-ಸೆಟ್ ಪರೀಕ್ಷೆಗೆ ಶೇ. 84ರಷ್ಟು ಹಾಗೂ ರಾಯಚೂರು ವಿವಿ ಪರೀಕ್ಷೆಗೆ ಶೇ. 64 ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು, ಬೆಳಗಾವಿ, ಬಳ್ಳಾರಿ, ಬೀದರ್, ದಾವಣಗೆರೆ, ಧಾರವಾಡ, ಕಲಬುರರ್ಗಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ ಹಾಗೂ ವಿಜಯಪುರ ಜಿಲ್ಲೆಗಳ ಒಟ್ಟು 252 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.
ರಾಯಚೂರು ವಿವಿ ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಿತು. ಈ ಪರೀಕ್ಷೆಯನ್ನು ವೆಬ್ಕಾಸ್ಟಿಂಗ್ ಮೂಲಕ ಕೆಇಎಯಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್ನಲ್ಲಿ ನಿಗಾವಹಿಸಲಾಯಿತು. ಯಾವುದೇ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಎಚ್ಚರವಹಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ದೂರವಾಣಿ: 080-23 564 583
ಸಹಾಯವಾಣಿ: 080-23 460 460.
ಇ-ಮೇಲ್: keauthority-ka@nic.in
ವೆಬ್ಸೈಟ್: https://kea.kar.nic.in
https://cetonline.karnataka.gov.in/vaoresult/ksetcompresult.aspx
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
View Comments
Kea anounce wrong key answers in revised key answers also and I requested for proper selection of cc andidates give more important for physically handicapped asper central government reservation please follow that rules properly