* ಕೋರ್ಟ್’ಗೆ ಹೋದವರಿಗೂ ಪರೀಕ್ಷೆ ಬರೆಯಲು ಅವಕಾಶ.!
ಬೆಂಗಳೂರು.26.ಏಪ್ರಿಲ್.25:- ಕೆಎಎಸ್ KAS ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆ ಪ್ರವೇಶ ಪತ್ರವನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ್ದು, ಆಯೋಗದ ಜಾಲತಾಣ https://kpsc.kar.nic.inನಲಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಮೇ 3, 5, 7 ಮತ್ತು 9 ರಂದು ಮುಖ್ಯ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಆಯೋಗದ ವೆಬ್ ಸೈಟನ್ ಲ್ಲಿ ಪ್ರಕಟಿಸಲಾಗಿದೆ. ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಇದ್ದ ಭಾಷಾಂತರ ದೋಷದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ 34 ಅಭ್ಯರ್ಥಿಗಳು ಮೇ ತಿಂಗಳಲ್ಲಿ ನಡೆಯುವ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಮುಖ್ಯ ಪರೀಕ್ಷೆ ಬರೆಯಲು ಈ ಅಭ್ಯರ್ಥಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಅವಕಾಶ ಕಲ್ಪಿಸಿದ್ದು, ಅವರು ಆಯೋಗದ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಏ. 28ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಮುಖ್ಯ ಪರಿಕ್ಷಾ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.
ಮುಖ್ಯ ಪರೀಕ್ಷೆಯ ಅರ್ಜಿ ನಮೂನೆಯನ್ನು ಆಯೋಗದ ಅಂತರ್ಜಾಲ https://kpsc.kar.nic.inನಲಿ..
ಅಪ್ಲೋಡ್ ಮಾಡಲಾಗಿದ್ದು, ಸದರಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಪರೀಕ್ಷಾ ಶುಲ್ಕ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ & ಅಂಗವಿಕಲ ಅಭ್ಯರ್ಥಿಗಳಿಗೆ ರೂ. 300/- & ಇತರೆ ಅಭ್ಯಾರ್ಥಿಗಳಿಗೆ ರೂ. 500/-)ವನ್ನು ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಇವರ ಹೆಸರಿಗೆ ಡಿ.ಡಿ./ಐ.ಪಿ.ಓ ಪಡೆದು ದಿನಾಂಕ:28-04-2025ರ ಸಂಜೆ 5.00 ಗಂಟೆಯೊಳಗಾಗಿ ಆಯೋಗದ ಕೇಂದ್ರ ಕಛೇರಿಗೆ ಮುದ್ದಾಂ/ಅಂಚೆ ಮೂಲಕ ಅರ್ಜಿಯನ್ನು ಸಲಿ..ಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ಸೈಟ್ನಲ್ಲಿ, ಲಭ್ಯವಿರುವ ಮುಖ್ಯಪರೀಕ್ಷೆಯ
ಅಧಿಸೂಚನೆ ಸಂಖ್ಯೆ: ಪಿಎಸ್ಸಿ 2474 ಇ(1)/2024-25, ದಿನಾಂಕ: 13-02-2025ಅನ್ನು ಓದಿಕೊಳ್ಳತಕ್ಕದ್ದು.
2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ…
ಬೆಂಗಳೂರು.10.ಜೂನ್.25:- ಉನ್ನತ ಶಿಕ್ಷಣ ಇಲಾಖೆಯ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಹಲವು ಅಂಶಗಳ…
ಜಿಲ್ಲೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳು 1) ಪ.ಜಾತಿ, ಪ.ವರ್ಗ, 2) ಹಿಂದುಳಿದ ವರ್ಗಗಳ 22 ವಸತಿ…
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…