KSRTC ಬಸ್ನಲ್ಲಿ ಪುರುಷ ಪ್ರಯಾಣಿಕರಿಗೆ ವಿಷೇಶ ಸೌಲಭ್ಯ :KSRTC ಮೈಸೂರು ವಿಭಾಗದಿಂದ ಆದೇಶ.!

ಮೈಸೂರು.21.ಫೆಬ್ರವರಿ25:-ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿರುವುದು ಅಂಕಿ ಅಂಶಗಳಿಂದ ತಿಳಿಬಂದಿದೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಹಲವೆಡೆ ಈ ಹಿಂದೆಯೂ ಕೇಳಿ ಬಂದಿದ್ದವು. ಆದರೆ ಈ ವಿಚಾರದಲ್ಲಿ ಕೆಎಸ್‌ಆರ್ಟಿಸಿ ಆದೇಶ ಹೊರಡಿಸುವಂತಾಗಿರುವುದು ಇದೇ ಮೊದಲಾಗಿದೆ.

ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟಿರುವ ಸೀಟುಗಳನ್ನು ಅವರಿಗೇ ಬಿಟ್ಟುಕೊಡಿ. ಮಹಿಳೆಯರಿಗೆ ಮೀಸಲಾತಿರುವ ಆಸನದಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ವಿಧಿಸಲಾಗುವುದು”, ಇತ್ಯಾದಿ ಸಂದೇಶಗಳನ್ನು ಹಿಂದೆ ನಾವು ಬಸ್ಸುಗಳಲ್ಲಿ ಓದಿರುತ್ತೇವೆ

ಆದರೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೆ ಬಂದ ಮೇಲೆ ಪರಿಸ್ಥಿತಿ ಬದಲಾಗಿದೆ. ಇದೀಗ ಪುರುಷರಿಗೆ ಸೀಟು ಬಿಟ್ಟುಕೊಡಿ ಎಂದು ಹೇಳುವ ಪರಿಸ್ಥಿತಿ ಸೃಷ್ಟಿಯಾಗಿದೆ. ಅಷ್ಟೇ ಏಕೆ, ಈ ವಿಚಾರವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗ ಅಧಿಕೃತ ಆದೇಶವನ್ನೂ ಹೊರಡಿಸಿದೆ!

ಮಹಿಳಾ ಪ್ರಯಾಣಿಕರೇ ಹೆಚ್ಚು ಇರುವ ಕಾರಣ ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಅವರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್‌ಆರ್ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಈಗ ಬೆಳಕಿಗೆ ಬಂದಿದೆ.


ಪುರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗುತ್ತಿದೆ. ಮೈಸೂರು ನಗರ ಸಾರಿಗೆ ವಾಹನಗಳಲ್ಲಿನ ಮರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದು, ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ಶ್ರೀ ವಿಷ್ಣುವರ್ಧನ.ಎಸ್ ಎಂಬವರು ಕೇಂದ್ರ ಕಚೇರಿಗೆ ಉಲ್ಲೇಖದಂತೆ ದೂರು ಸಲ್ಲಿಸಿರುವುದು ಸರಿಯಷ್ಟೆ. ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ

ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಕೆಎಸ್ಆರ್ಟಿಸಿ ಆದೇಶದ ಪ್ರತಿ

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

12 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

13 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

13 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

13 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago