“LIC”ಎಲ್‌ಐಸಿ ವತಿಯೆಂದ ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕೆ ಅರ್ಜಿ ಆಹ್ವಾನ!

ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ 1 ನೇ ಸೆಪ್ಟೆಂಬರ್, 1956 ರಂದು ಅಸ್ತಿತ್ವಕ್ಕೆ ಬಂದಿತು, ಜೀವ ವಿಮೆಯನ್ನು ಹೆಚ್ಚು ವ್ಯಾಪಕವಾಗಿ ಮತ್ತು ನಿರ್ದಿಷ್ಟವಾಗಿ ಗ್ರಾಮೀಣ ಪ್ರದೇಶಗಳಿಗೆ ಹರಡುವ ಉದ್ದೇಶದಿಂದ ದೇಶದ ಎಲ್ಲಾ ವಿಮೆ ಮಾಡಬಹುದಾದ ವ್ಯಕ್ತಿಗಳನ್ನು ತಲುಪುವ ಉದ್ದೇಶದಿಂದ ಅವರಿಗೆ ಸಾಕಷ್ಟು ಆರ್ಥಿಕ ರಕ್ಷಣೆಯನ್ನು ಒದಗಿಸುತ್ತದೆ. ಸಮಂಜಸವಾದ ವೆಚ್ಚ.
LIC ಯ ವಿವರಗಳು |

ಎಲ್‌ಐಸಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ಭಾರತೀಯ ಜೀವವಿಮಾ ನಿಗಮವು ( LIC) ದೇಶದ ವಿವಿಧ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಈ ಸಂಬಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಎಲ್‌ಐಸಿಯು ಭಾರತದ ಅತ್ಯಂತ ದೊಡ್ಡ ಜೀವವಿಮೆ ನೀಡುವ ಕಂಪನಿಯಾಗಿದ್ದು, ಸಂಪೂರ್ಣವಾಗಿ ಭಾರತ ಸರ್ಕಾರದ ಅಧೀನಕ್ಕೆ ಒಳಪಟ್ಟಿದೆ.

ಇನ್ನು ಇದೀಗ ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ ಯೋಜನೆ 2024ರ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಹಾಗಾದರೆ ಈ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಹರು, ಯಾರು ಅರ್ಜಿ ಸಲ್ಲಿಸಬಹುದು ನೋಡೋಣ ಬನ್ನಿ..

ಎಲ್‌ಐಸಿಯು ವಿವಿಧ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ (Students Scholarship) ವೇತನಕ್ಕಾಗಿ ಅರ್ಜಿ ಆಹ್ವಾನ ಮಾಡಿದೆ. ಎಲ್‌ಐಸಿ ಗೋಲ್ಡನ್‌ ಜುಬಿಲೀ ಫೌಂಡೇಶನ್ ಆಡಿಯಲ್ಲಿ ಅಖಿಲ ಭಾರತ ಆಧಾರದ ಮೇಲೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ.

ಶೈಕ್ಷಣಿಕ ವರ್ಷ 2021-22, 2023-23 ಅಥವಾ 2023-24 ರಲ್ಲಿ Xth / XIIth (ಎಸ್‌ಎಸ್‌ಎಲ್‌ಸಿ ಅಥವಾ ದ್ವಿತೀಯ ಪಿಯುಸಿ) ಡಿಪ್ಲೋಮಾ ಅಥವಾ ಅದಕ್ಕೆ ಸಮಾನಾಂತರ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ಇಲ್ಲವೇ ಸಮಾನ CGPA ಗ್ರೇಡ್‌ನೊಂದಿಗೆ ಉತ್ತೀರ್ಣರಾದ ಮತ್ತು 2024-25ರ ಶೈಕ್ಷಣಿಕ ಮೊದಲ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದು ಘೋಷಿಸಲಾಗಿದೆ.

ಇನ್ನು ವಿವಿಧ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ವಿದ್ಯಾರ್ಥಿ ವೇತನ ಅನ್ವಯವಾಗಲಿದೆ. ಉನ್ನತ ಶಿಕ್ಷಣ ಮಾಡಬೇಕು ಎಂದು ಇಚ್ಛಿಸುತ್ತಿರುವ ಯುವಕ ಹಾಗೂ ಯುವತಿಯರಿಗಾಗಿ ಸಾಮಾನ್ಯ ವಿದ್ಯಾರ್ಥಿ ವೇತನವನ್ನೂ ಪರಿಚಯಿಸಲಾಗಿದೆ.

* ವೈದ್ಯಕೀಯ, ಇಂಜಿನಿಯರಿಂಗ್, ಯಾವುದೇ ವಿಭಾಗದಲ್ಲಿ ಪದವಿ, ಯಾವುದೇ ಕ್ಷೇತ್ರದಲ್ಲಿ ಡಿಪ್ಲೊಮಾ ಕೋರ್ಸ್ ಮತ್ತು ಇಂಟಿಗ್ರೇಟೆಡ್ ಕೋರ್ಸ್‌ಗಳನ್ನು ಮಾಡುವವರಿಗೆ.

ಸರ್ಕಾರಿ ಮಾನ್ಯತೆ ಪಡೆದ ಕಾಲೇಜುಗಳು ಸಂಸ್ಥೆಗಳು ಅಥವಾ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ (ITI) ಕೋರ್ಸ್‌ಗಳ ಮೂಲಕ ವೃತ್ತಿಪರ ಕೋರ್ಸ್ ಮಾಡುವವರಿಗೆ ಇದು ಅನ್ವಯವಾಗಲಿದೆ.

ಇನ್ನು ಕೆಲವು ನಿರ್ದಿಷ್ಟ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ಹೆಣ್ಣು ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನವನ್ನು ಪರಿಚಯಿಸಲಾಗಿದೆ.

ಅದರಲ್ಲಿ 10+2 ಪ್ಯಾಟರ್ನ್ ಅಂತರ್ಗತ ಕ್ಲಾಸ್ XI ಮತ್ತು XII ಅಥವಾ ಇಂಟರ್‌ಮೀಡಿಯಟ್ ವಿದ್ಯಾಭ್ಯಾಸ ಮಾಡುವ ಹೆಣ್ಣು ಮಕ್ಕಳು ಹಾಗೂ Xlh (ಎಸ್‌ಎಸ್‌ಎಲ್‌ಸಿ)ಯ ನಂತರ ಯಾವುದೇ ಕ್ಷೇತ್ರದಲ್ಲಿ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ ಮಾಡುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ ಎಂದು ಎಲ್‌ಐಸಿಯ ಪ್ರಕಟಣೆ ತಿಳಿಸಿದೆ.

ಯಾರಿಗೆ ಅನ್ವಯಿಸಲಿದೆ: ಮೇಲೆ ಹೇಳಿದ ವಿದ್ಯಾಭ್ಯಾಸ ಮಾಡಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಅನ್ವಯವಾಗಲಿದೆ.

ಮುಖ್ಯವಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳನ್ನು ಆದ್ಯತೆಯ ಮೇಲೆ ಈ ವಿದ್ಯಾರ್ಥಿ ವೇತನಕ್ಕೆ ಪರಿಗಣಿಸಲಾಗುತ್ತದೆ.

ಇನ್ನು ಕೆಲವು ನಿರ್ದಿಷ್ಟ ಷರತ್ತುಗಳನ್ನು ಸಹ ವಿಧಿಸಲಾಗಿದೆ. ಆನ್‌ಲೈನ್‌ ಅರ್ಜಿ, ಇತರ ಅರ್ಹತಾ ಷರತ್ತುಗಳು ಮತ್ತು ಯೋಜನೆಯ ವಿವರಗಳನ್ನು ತಿಳಿದುಕೊಳ್ಳಲು ನೀವು ಅಧಿಕೃತ ವೆಬ್‌ಸೈಟ್‌ https://licindia.in dc.

(https://licindia.in/)ಗೆ ಭೇಟಿ ನೀಡಬಹುದಾಗಿದೆ. ಇನ್ನು ಆನ್‌ಲೈನ್‌ ಅರ್ಜಿಯನ್ನು ಸಲ್ಲಿಸಲು

ಕೊನೆಯ ದಿನಾಂಕ 22.12.2024 ಎಂದು ಹೇಳಲಾಗಿದೆ.

prajaprabhat

View Comments

Recent Posts

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

3 hours ago

ರಾಜ್ಯ ‘ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯ |

ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…

4 hours ago

ಕರ್ಣಾಟಕ ರಾಜ್ಯದ ಈ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ! ಕೇಂದ್ರದಿಂದ ಆತಂಕಕಾರಿ ವರದಿ!

ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…

9 hours ago

ತೋಟಗಾರಿಕೆ ವಿಶ್ವವಿದ್ಯಾಲಯ ಘಟಿಕೋತ್ಸವ ಜೂನ್ 10ರಂದು ನಡೆಯಲಿದೆ.

ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ  ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…

17 hours ago

ಫ್ರೆಂಚ್ ಓಪನ್ ಟೆನಿಸ್: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಪಂದ್ಯದಲ್ಲಿ ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ವಿಶ್ವದ ನಂ. 2 ಆಟಗಾರ್ತಿ ಕೊಕೊ ಗೌಫ್ ಅವರನ್ನು ಎದುರಿಸಲಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್‌ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…

18 hours ago

ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಬ್ರಿಕ್ಸ್ ರಾಷ್ಟ್ರಗಳು, ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ನೀತಿಯನ್ನು ಬೆಂಬಲಿಸಿವೆ.

"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…

18 hours ago