ಚೆನೈ.23.ಫೆ.25:- NEP 2020 ಮುಂದುವರಿದು ಎನ್ಇಪಿ (NEP NEW EDUCATION POLICY 2020) ಅನುಷ್ಠಾನಗೊಳಿಸಿದರೆ ತಮಿಳುನಾಡಿಗೆ ₹ 2,000 ಕೋಟಿ ದೊರೆಯಲಿದೆ ಎಂದು ಕೇಂದ್ರ ಹೇಳುತ್ತಿದೆ. ಕೇಂದ್ರವು ₹ 10,000 ಕೋಟಿ ನೀಡಿದರೂ ಎನ್ಇಪಿಯನ್ನು ಜಾರಿಮಾಡುವುದಿಲ್ಲ ಎಂದು ಹೇಳಲು ಬಯಸುತ್ತೇನೆ.
ರಾಜ್ಯವನ್ನು 2,000 ವರ್ಷಗಳಷ್ಟು ಹಿಂದಕ್ಕೆ ತಳ್ಳುವ ಪಾಪದ ಕೆಲಸ ಮಾಡುವುದಿಲ್ಲ ಎಂದು ಕಟುವಾಗಿ ಹೇಳಿದ್ದಾರೆ.
ತ್ರಿಭಾಷಾ ಸೂತ್ರ ಅಳವಡಿಕೆ ಸಂಬಂಧ ತಮಿಳುನಾಡು ಮತ್ತು ಕೇಂದ್ರ ಸರಕಾರ ನಡುವಿನ ವಾಕ್ಸಮರ ತೀವ್ರಗೊಂಡಿದೆ.
ಕೇಂದ್ರದ ವಿರುದ್ಧ ಮತ್ತೆ ಹರಿಹಾಯ್ದಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಎನ್ಇಪಿ ಜಾರಿ ಮಾಡಿದರೆ ತಮಿಳುನಾಡು 2000 ವರ್ಷ ಹಿಂದಕ್ಕೆ ಹೋಗುತ್ತದೆ ಎಂದಿದ್ದಾರೆ.
ಅಲ್ಲದೇ ಕೇಂದ್ರ ಸರಕಾರ 10,000 ಕೋಟಿ ರೂ. ನೀಡಿದರೂ ನಾವು ರಾಜ್ಯದಲ್ಲಿ ಎನ್ಇಪಿ ಜಾರಿ ಮಾಡಲ್ಲ ಎಂದಿದ್ದಾರೆ. 8 ಕೋಟಿ ಜನ ಮಾತನಾಡುವ ತಮಿಳು ಭಾಷೆಗೆ ಕೇವಲ 74 ಕೋಟಿ ರೂ. ಮಾತ್ರ ನೀಡಿದೆ. ಸಾವಿರ ಲೆಕ್ಕದಲ್ಲಿ ಮಾತನಾಡುವ ಸಂಸ್ಕೃತಕ್ಕೆ 1,488 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
NEP 2020 ಎನ್ಇಪಿಗೆ ವಿರೋಧ ವ್ಯಕ್ತಪಡಿಸಿರುವುದು ಹಿಂದಿ ಹೇರಿಕೆಯ ಕಾರಣಕ್ಕಷ್ಟೇ ಅಲ್ಲ.
ವಿದ್ಯಾರ್ಥಿಗಳ ಭವಿಷ್ಯ ಹಾಗೂ ಸಾಮಾಜಿಕ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡಬಲ್ಲ ಹಲವು ಅಂಶಗಳೂ ಇದಕ್ಕೆ ಕಾರಣ ಎಂದು ಪ್ರತಿಪಾದಿಸಿದ್ದಾರೆ.
ಪೋಷಕರು ಮತ್ತು ಶಿಕ್ಷಕರ ಸಂಘಟನೆ ಕುಡಲೋರ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಸ್ಟಾಲಿನ್ ವೈದ್ಯಕೀಯ ಕೋರ್ಸ್ಗಳಿಗೆ ನೀಟ್ ಪರೀಕ್ಷೆ ಇರುವಂತೆ ಕಲೆ ಮತ್ತು ವಿಜ್ಞಾನ ಪದವಿ ತರಗತಿಗಳಿಗೆ ದಾಖಲಾಗಲು ಪ್ರವೇಶ ಪರೀಕ್ಷೆ ಇರುವುದನ್ನು ಹೊರತಪಡಿಸಿ ನೂತನ ಶಿಕ್ಷಣ ನೀತಿಯಲ್ಲಿ ಪದವಿಯ ನಡುವೆಯೇ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುವ ಅವಕಾಶ ಕಲ್ಪಿಸಿದೆ’ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೇ ಮೊಟಕುಗೊಳಿಸಲು ಅವಕಾಶ ಕಲ್ಪಿಸುವುದು ವಿದ್ಯಾಭ್ಯಾಸವನ್ನು ನಿಲ್ಲಿಸುವಂತೆ ಹೇಳಿದಂತೆ’ ಎಂದಿದ್ದಾರೆ.
ಹಾಗೆಯೇ ನಾವು ಯಾವುದೇ ಭಾಷೆಯನ್ನು ವಿರೋಧಿಸುತ್ತಿಲ್ಲ. ಆದರೆ ಹೇರಿಕೆಯನ್ನು ತಿರಸ್ಕರಿಸುವ ವಿಚಾರದಲ್ಲಿ ಅಚಲವಾಗಿದ್ದೇವೆ.
ಹಿಂದಿ ಹೇರಿಕೆ ಕಾರಣಕ್ಕಷ್ಟೇ ನಾವು ಎನ್ಇಪಿಯನ್ನು ವಿರೋಧಿಸುತ್ತಿಲ್ಲ.
ಇನ್ನೂ ಹಲವು ಕಾರಣಗಳಿವೆ. ಎನ್ಇಪಿಯು ನಮ್ಮನ್ನು ಹಿಂದಕ್ಕೆ ಕರೆದೊಯ್ಯುತ್ತದೆ. ಇದು ಮಕ್ಕಳನ್ನು ಶಿಕ್ಷಣದಿಂದ ದೂರವಿಡುತ್ತದೆ’ ಎಂದು ಒತ್ತಿ ಹೇಳಿದ್ದಾರೆ.
SC/ST ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನಿಲ್ಲಿಸುವುದಲ್ಲದೆ, ಮೂರನೇ ಐದನೇ ಹಾಗೂ ಎಂಟನೇ ತರಗತಿಗಳಿಗೆ ಸಾರ್ವಜನಿಕ ಪರೀಕ್ಷೆಯನ್ನು ಪ್ರಸ್ತಾಪಿಸಲಾಗಿದೆ. ಹಾಗೆಯೇ ಕಲೆ ಮತ್ತು ವಿಜ್ಞಾನ ಪದವಿ ತರಗತಿಗಳಿಗೆ ದಾಖಲಾಗಲು ಪ್ರವೇಶ ಪರೀಕ್ಷೆಯನ್ನು ಎನ್ಇಪಿ ಪರಿಚಯಿಸುತ್ತದೆ’ ಎಂದು ಸಿಎಂ ಹೇಳಿದ್ದಾರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…