SSLC ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್’ಟಾಪ್ ವಿತರಣೆ.!

ಬೆಂಗಳೂರು.25.ಏಪ್ರಿಲ್-2024ರ ಮಾಹೆಯ ಎಸ್.ಎಸ್.ಎಲ್.ಸಿ SSLC ಪರೀಕ್ಷೆಯಲ್ಲಿ ಜಿಲ್ಲಾವಾರು ಮತ್ತು ವಲಯ ವಾರು ಸರ್ಕಾರಿ ಪ್ರೌಢ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ಅತಿ ಹೆಚ್ಚು ಅಂಕ  ಗಳಸಿದ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಉಚಿತ ಲ್ಯಾಪ್ಟಾಪ್ ವಿತರಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಏಪ್ರಿಲ್-2024 ಮಾಹೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ಟಾಪ್ ವಿತರಿಸಲಾಗುತ್ತಿದ್ದು, 2024ನೇ ಸಾಲಿಗೆ ಜಿಲ್ಲಾವಾರು 115 ಮತ್ತು ಬ್ಲಾಕ್ವಾರು 641 ಒಳಗೊಂಡಂತೆ ಒಟ್ಟಾರೆಯಾಗಿ 756 ಫಲಾನುಭವಿಗಳಿಗೆ ಲ್ಯಾಪ್ಟಾಪ್ ವಿತರಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಕೈಗೊಂಡು ಸರಬರಾಜುದಾರರನ್ನು ಗುರುತಿಸಲಾಗಿದ್ದು, ಈ ಸಂಬಂಧ ರೂ.3.25,16,940/-ಗಳ ಅನುದಾನದ ಅಗತ್ಯವಿದ್ದು,

ಈಗಾಗಲೇ ನಿಗದಿಪಡಿಸಲಾದ ರೂ.280.00 ಲಕ್ಷಗಳ ಎದುರಾಗಿ ರೂ.80.00 ಲಕ್ಷಗಳ ಅನುದಾನ ಒದಗಿಸಲಾಗಿದ್ದು, ಉಳಿಕೆ ರೂ.200.00 ಲಕ್ಷಗಳನ್ನು ಲೆಕ್ಕ ಶೀರ್ಷಿಕೆ:2202-01-109-0-10 ಯ ಉಪಶೀರ್ಷಿಕೆ:059 ಅಡಿಯಲ್ಲಿ ಬಿಡುಗಡೆಗೊಳಿಸುವಂತೆ ಹಾಗೂ ಉಳಿಕೆ ಅನುದಾನಕ್ಕಾಗಿ ಕೆ.ಎಸ್.ಕ್ಯೂ.ಎ.ಎ.ಸಿ ವಿಭಾಗದಲ್ಲಿ ಉಳಿಕೆಯಿರುವ ರೂ.9.30 ಲಕ್ಷಗಳನ್ನು ಹಾಗೂ ಮಂಡಲಿಯ ಅನುದಾನ ರೂ.35.86,940/- ಗಳನ್ನು ಭರಿಸಲು ಅನುಮತಿ ನೀಡುವಂತೆ ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮಾಂಕ (2) ರ ಸರ್ಕಾರದ ಆದೇಶದಲ್ಲಿ, 2024-25ನೇ ಸಾಲಿನ ಮುಂದುವರಿಕೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅನುಮತಿ ನೀಡಲಾಗಿದ್ದು, ಸದರಿ ಆದೇಶದಲ್ಲಿ 2024-25ನೇ ಸಾಲಿನ ಆಯವ್ಯಯದ ‘ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮಗಳು’ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ:2202-01-109-0-107-059 (ಇತರೆ ವೆಚ್ಚಗಳು) ರಡಿ ನಿಗದಿಯಾಗಿರುವ ರೂ800.00 ಲಕ್ಷಗಳಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ಟಾಪ್ ವಿತರಿಸಲು ರೂ.280.00 ಲಕ್ಷಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಏಪ್ರಿಲ್-2024ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂರು ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು 204 ವಲಯ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಕ್ಷೇತ್ರ ಶಿಕ್ಷಣಾಧಿಕಾರಿ ವಲಯದ ಮೂರು ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟು 756 ಫಲಾನುಭವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಉಚಿತ ಲ್ಯಾಪ್ಟಾಪ್ ವಿತರಿಸಲು ಆಗತ್ಯವಿರುವ ರೂ. 3,25,16,940/-ಗಳ ಪೈಕಿ, 2024-25ನೇ ಸಾಲಿನ ಆಯವ್ಯಯದ ‘ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮಗಳು’ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ:2202-01-109-0-107-059 (ಇತರೆ ವೆಚ್ಚಗಳು) ರಡಿ ನಿಗದಿಯಾಗಿರುವ ರೂ.280.00 ಲಕ್ಷಗಳು ಹಾಗೂ ಕೆ.ಎಸ್.ಕ್ಯೂ.ಎ.ಎ.ಸಿ ವಿಭಾಗದಲ್ಲಿ ಉಳಿಕೆಯಿರುವ ರೂ.9.30 ಲಕ್ಷಗಳನ್ನು ಹಾಗೂ ಮಂಡಲಿಯಲ್ಲಿ ಲಭ್ಯವಿರುವ ರೂ.35,86,940/- ಗಳನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು, ಇವರು ನಿಯಮಾನುಸಾರ ಭರಿಸತಕ್ಕದ್ದು.
ಷರತ್ತುಗಳು:

ಮೇಲ್ಕಂಡಂತೆ ಒದಗಿಸಲಾದ ಅನುದಾನದಲ್ಲಿ ನಿಯಮಾನುಸಾರ ಅರ್ಹ ಪ್ರತಿಭಾವಂತ ಫಲಾನುಭವಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ವಿತರಿಸಲು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು, ಇವರು ಕ್ರಮವಹಿಸತಕ್ಕದ್ದು.


ಜಿಲ್ಲಾಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿ ಪ್ರೋತ್ಸಾಹಕವಾಗಿ ಲ್ಯಾಪ್ಟಾಪ್ ಪಡೆದಂತಹ ವಿದ್ಯಾರ್ಥಿಗಳನ್ನು ಮತ್ತೊಮ್ಮೆ ವಲಯ ಮಟ್ಟಕ್ಕೆ ಪರಿಗಣಿಸಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.


ಬಿಡುಗಡೆಯಾದ ಅನುದಾನಕ್ಕೆ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು ಇವರು ನಿಯಮಾನುಸಾರ ಲೆಕ್ಕ ಪತ್ರಗಳನ್ನು ಇಡತಕ್ಕದ್ದು.
ಎಲ್ಲಾ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ಶೀಘ್ರವಾಗಿ ವಿತರಿಸತಕ್ಕದ್ದು ಹಾಗೂ ವಿತರಣೆ ಪೂರ್ಣಗೊಂಡ ನಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸತಕ್ಕದ್ದು.


ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲು ಹೊರಡಿಸಲಾದ ಕಛೇರಿ ಜ್ಞಾಪನವನ್ನು ಹಾಗೂ ಸದರಿ ಸರ್ಕಾರಿ ಆದೇಶವನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಹಾಗೂ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು ಈ ಕಛೇರಿಯ ವೆಬ್ಸೈಟ್ಗಳಲ್ಲಿ ಕಡ್ಡಾಯವಾಗಿ ಪ್ರಕಟಿಸತಕ್ಕದ್ದು.
ಖರೀದಿ ಪ್ರಕ್ರಿಯೆಯಲ್ಲಿ ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ ಅಧಿನಿಯಮ-1999 ರ ನಿಯಮಗಳು ಮತ್ತು ತತ್ಸಂಬಂಧ ಕಾಲಕಾಲಕ್ಕೆ ಹೊರಡಿಸಲಾದ/ಹೊರಡಿಸಲಾಗುವ ಆದೇಶ/ಸುತ್ತೋಲೆಗಳ ಸೂಚನೆಗಳನ್ನು ಹಾಗೂ ಲ್ಯಾಪ್ ಟಾಪ್ ಖರೀದಿ ಇ-ಟೆಂಡರ್ ಪ್ರಕ್ರಿಯೆಯ ದಸ್ತಾವೇಜಿನಲ್ಲಿ ನಿಗದಿಪಡಿಲಾಗಿರುವ ಪ್ರಚಲಿತ ನಿಯಮಗಳನ್ನು ಮತ್ತು ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸುಗಳನ್ನು ಚಾಚೂ ತಪ್ಪದೆ ಪಾಲಿಸತಕ್ಕದ್ದು.

prajaprabhat

Recent Posts

ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ಸಿಎಂ,ಡಿಸಿಎಂ, ಹಾಗೂ ಉನ್ನತ ಶಿಕ್ಷಣ ಸಚಿವರು ವರದಿ ಸ್ವೀಕರಿಸಿದ್ದಾರೆ.

ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…

2 hours ago

ಸಕ್ರಿಯ ರಾಜಕಾರಣಕ್ಕೆ ಬಂದು ನನ್ನ ವಿರುದ್ಧ ಆರೋಪ ಮಾಡಿ : ಡಾ.ಎಂ.ಸಿ.ಸುಧಾಕರ್ ಕಿಡಿ

ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…

5 hours ago

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ಸಂದರ್ಶನ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…

5 hours ago

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

12 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

12 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

14 hours ago