UGC ಹೊಸ ನಿಯಮಾವಳಿ 2025, ಎಲ್ಲ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಸಭೆ

ಬೆಂಗಳೂರು: 24.ಜನೆವರಿ.25:- ಕೇಂದ್ರಸರಕಾರ ಯುಜಿಸಿ ಹೊಸ ನಿಯಮಾವಳಿಗೆಸಂಬಂದಿಸಿದ ಎಲ್ಲಾರಾಜ್ಯಸರ್ಕಾರಗಳು ಸಮವೇಶ್ ಮಾಡುತ್ತಿದ್ದಾರೆ.

‘ನಮ್ಮ ತೆರಿಗೆ ನಮ್ಮ ಹಕ್ಕು’ ಎಂದು ದಿಲ್ಲಿ ಪರೇಡ್‌ ನಡೆಸಿ, ಕಾಂಗ್ರೆಸ್‌ ಮತ್ತು ಐಎನ್‌ಡಿಐಎ ಒಕ್ಕೂಟದ ಪಕ್ಷಗಳ ಆಡಳಿತವಿರುವ ರಾಜ್ಯಗಳ ಹಣಕಾಸು ಸಚಿವರ ಸಭೆ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದ ರಾಜ್ಯ ಕಾಂಗ್ರೆಸ್‌ ಸರಕಾರವು ಈಗ ವಿಶ್ವವಿದ್ಯಾನಿಲಯಗಳ ಕುಲಪತಿ ನೇಮಕಾತಿಯಲ್ಲಿ ವಿಷಯ ದಲ್ಲಿ ಕೇಂದ್ರ ಸರಕಾರದ ವಿರುದ್ಧ ಮತ್ತೂಂದು ಹೋರಾಟಕ್ಕೆ ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿದೆ.

ಯುಜಿಸಿ ನಿಯಮ ತಿದ್ದುಪಡಿಯ ವಿರುದ್ಧ ವಿವಿಧ ರಾಜ್ಯಗಳ ಶಿಕ್ಷಣ ಸಚಿವರನ್ನು ಸಂಘಟಿಸಿ, ಕೇಂದ್ರದ ಮೇಲೆ ಒತ್ತಡ ಹೇರಲು ಮುಂದಾಗಿದೆ. ಈ ಸಂಬಂಧ ಫೆ. 5ರಂದು ಬೆಂಗಳೂರಿನಲ್ಲಿ ಎಲ್ಲ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಸಮಾವೇಶ ಆಯೋಜಿಸಿದ್ದು, ಗುರುವಾರ ಹೊಸದಿಲ್ಲಿಯಲ್ಲಿ ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌ ವಿವರಣೆ ನೀಡಿದ್ದಾರೆ.

ಸಮಾವೇಶದಲ್ಲಿ ಯುಜಿಸಿ ನಿಯಮದಲ್ಲಿರುವ ಶಿಕ್ಷಕರ ನೇಮಕಾತಿ ಮತ್ತು ಉತ್ತೇಜನಕ್ಕೆ ಕನಿಷ್ಠ ಅರ್ಹತೆಗಳು, ಶೈಕ್ಷಣಿಕ ಗುಣಮಟ್ಟ ಮತ್ತು ಕರಡು ಬಗ್ಗೆ ಚರ್ಚಿಸಲು ಭಾಗವಹಿಸಲು ಎಲ್ಲ ರಾಜ್ಯಗಳ ಉನ್ನತ ಶಿಕ್ಷಣ ಸಚಿವರನ್ನು ಆಹ್ವಾನಿಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟನೆ ಕೊಟ್ಟಿದ್ದಾರೆ.

ಅಧಿಕಾರ ಮೊಟಕು
ಯುಜಿಸಿ ಕರಡು ನಿಯಮಾವಳಿ ರಾಜ್ಯಗಳು ನ್ಯಾಯಸಮ್ಮತವಾಗಿ ಹೊಂದಿದ್ದ ಅಧಿಕಾರವನ್ನು ತೀವ್ರ ವಾಗಿ ಮೊಟಕುಗೊಳಿಸುತ್ತದೆ. ಹಲವು ರಾಜ್ಯ ಗಳು ಈಗಾಗಲೇ ಈ ನಿಯಮಗಳ ವಿರುದ್ಧ ವಿರೋಧ ವ್ಯಕ್ತಪಡಿಸಿವೆ. ಕರಡು ನಿಯಮಾವಳಿಗಳ ಸಾಧಕ-ಬಾಧಕ ಚರ್ಚಿಸಲು ಮತ್ತು ಸಾಮಾನ್ಯ ನಿಲುವು ತೆಗೆದುಕೊಳ್ಳಲು ಈ ಸಮಾವೇಶವನ್ನು ಕರೆಯಲಾಗುತ್ತಿದೆ ಎಂದಿದ್ದಾರೆ.

ಒತ್ತಡ ಸೃಷ್ಟಿಸಲು ಸಮಾವೇಶ?
ವಿ.ವಿ.ಗಳಲ್ಲಿ ಕುಲಪತಿ ನೇಮಕ ಸಂಬಂಧಿಸಿ ನಡೆದಿರುವ ಬೆಳವಣಿಗೆ ಗಮನದಲ್ಲಿ ಇಟ್ಟುಕೊಂಡು ಈ ಮೂಲಕ ಕೇಂದ್ರ ಸರಕಾರದ ಮೇಲೆ ಒತ್ತಡ ಸೃಷ್ಟಿಸಲು ಸಮಾವೇಶ ಆಯೋಜಿಸಿರುವ ಸಾಧ್ಯತೆಗಳಿವೆ.

ವಿಶ್ವವಿದ್ಯಾಲಯ ಕುಲಪತಿ ನೇಮಕ ಸಂಬಂಧಿಸಿ ನಾನ್ ಬಿಜೆಪಿ ಅಡಳಿತ ರಾಜ್ಯಗಳ ಸಮಾವೇಶ ಇಟ್ಟುಕೊಂಡು ಈ ಮೂಲಕ ಕೇಂದ್ರ ಸರಕಾರದ ಮೇಲೆ ಒತ್ತಡ ಸೃಷ್ಟಿಸಲು  ಆಗೋಸ್ಕರ ಸಮಾವೇಶ ಆಯೋಜಿಸಿರುವ ಸಾಧ್ಯತೆಗಳಿವೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

9 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

9 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

9 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

9 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

10 hours ago