Vande Bharat Express: ಬೆಂಗಳೂರು-ಕಲ್ಯಾಣ ಕರ್ನಾಟಕಕ್ಕೆ ವಂದೇ ಭಾರತ್ ರೈಲು

ಬೀದರ.10.ಫೆ.25:- ರಾಜ್ಯದ ಗಡಿ ಜಿಲ್ಲೆ ಬೀದರ ವತಿಯಿಂದ ಬಿಜೆಪಿಯ ಮುಖಂಡರ ನಿಯೋಗ ತುಮಕೂರು ಸಂಸದ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ನೇತೃತ್ವದಲ್ಲಿ ನಿಯೋಗ ಸಚಿವರನ್ನು ಭೇಟಿ ಮಾಡಿತ್ತು.

Vande Bharat Express: ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ

ನಿಯೋಗ ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಬೇಕು.

ಬೀದರ್-ಬೆಂಗಳೂರು ವಯಾ ಕಲಬುರಗಿ ಹೊಸ ರೈಲು ಸಂಚಾರ ಆರಂಭಿಸಬೇಕು ಎಂದು ಮನವಿ ಮಾಡಿದೆ. ಸೋಲ್ಹಾಪುರ-ಯಶವಂತಪುರ ಎಕ್ಸ್‌ಪ್ರೆಸ್ ರೈಲನ್ನು ಬೀದರ್-ಯಶವಂತಪುರವಾಗಿ ಬದಲಾವಣೆ ಮಾಡಬೇಕು. ಬೀದರ್-ಬೆಳಗಾವಿ ವಯಾ ಕಲಬುರಗಿ, ಗುರುಮಿಠಕಲ್, ಬಳ್ಳಾರಿ ಮತ್ತು ಹುಬ್ಬಳ್ಳಿ ರೈಲು ಪ್ರಾರಂಭಿಸಬೇಕು ಎಂದು ಒತ್ತಾಯಿಸಲಾಗಿದೆ.

Vande Bharat Express: ವಂದೇ ಭಾರತ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಶೀಘ್ರವೇ ಸಮೀಕ್ಷೆ ಮುಗಿಸಬೇಕು: ಬಿಜೆಪಿ ನಾಯಕರ ನಿಯೋಗ ಬೀದರ್-ನಾಂದೇಡ ವಯಾ ಔರಾದ್ ರೈಲು ಮಾರ್ಗದ ಸಮೀಕ್ಷೆ ಕಾರ್ಯಕ್ಕೆ ಅನುಮೋದನೆ ಸಿಕ್ಕಿದೆ. ಈ ಕಾರ್ಯವನ್ನು ಶೀಘ್ರದಲ್ಲಿ ಮುಗಿಸಿ ವರದಿ ಸಲ್ಲಿಸಬೇಕು ಎಂದು ಸಚಿವ ವಿ. ಸೋಮಣ್ಣಗೆ ಮನವಿ ಮಾಡಿದೆ.

Namo Bharat Train: ಕರ್ನಾಟಕಕ್ಕೆ 2 ನಮೋ ಭಾರತ್ ರೈಲು, ಮಾರ್ಗಗಳು

2024ರ ಡಿಸೆಂಬರ್‌ನಲ್ಲಿ ಬೀದರ್ ಸಂಸದ ಸಾಗರ್ ಖಂಡ್ರೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ಮಾಡಿದ್ದರು. ಕ್ಷೇತ್ರದ ರೈಲ್ವೆ ಯೋಜನೆ ಕುರಿತು ಅವರು ಸಚಿವರಿಗೆ ಹಲವು ಮನವಿಗಳನ್ನು ಸಲ್ಲಿಕೆ ಮಾಡಿದ್ದರು. ಆಗ ಬೀದರ್- ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಬೇಕು ಎಂದು ಮನವಿ ಸಲ್ಲಿಸಿದ್ದರು.

ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಿದರೆ ಉಭಯ ನಗರಗಳ ನಡುವಿನ ಪ್ರಯಾಣದ ಅವಧಿ ಕಡಿಮೆಯಾಗಲಿದೆ. ಅಲ್ಲದೇ ಹಲವು ಉದ್ಯಮಿಗಳು ಬೀದರ್‌ನಿಂದ ಹೈದರಾಬಾದ್‌ಗೆ ತೆರಳಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರು ತಲುಪುತ್ತಾರೆ. ರೈಲು ಸೇವೆ ಆರಂಭವಾದರೆ ಅವರು ನೇರವಾಗಿ ಬೆಂಗಳೂರು ತಲುಪಬಹುದು ಎಂದು ಸಂಸದರು ಸಚಿವರ ಜೊತೆ ಚರ್ಚಿಸಿದ್ದರು.

ಫೆಬ್ರವರಿ 10: ಹೊಸ ಹೊಸ ಮಾರ್ಗದಲ್ಲಿ ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಓಡಿಸಬೇಕು ಎಂದು ಬೇಡಿಕೆ ಇದೆ. ಸದ್ಯ ಕರ್ನಾಟಕದಲ್ಲಿ 7ಕ್ಕೂ ಅಧಿಕ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳು ಸಂಚಾರ ನಡೆಸುತ್ತಿವೆ. ರಾಜಧಾನಿ ಬೆಂಗಳೂರು ಮತ್ತು ಕಲ್ಯಾಣ ಕರ್ನಾಟಕ ಸಂಪರ್ಕಿಸಲು ವಂದೇ ಭಾರತ್ ರೈಲು ಓಡಿಸಬೇಕು ಎಂದು ಬೇಡಿಕೆ ಸಲ್ಲಿಸಲಾಗಿದೆ.

ಸದ್ಯ ಭಾರತೀಯ ರೈಲ್ವೆ ಕರ್ನಾಟಕಕ್ಕೆ ಯಾವುದೇ ಹೊಸ ವಂದೇ ಭಾರತ್ ರೈಲುಗಳನ್ನು ಘೋಷಣೆ ಮಾಡಿಲ್ಲ. ಬೆಂಗಳೂರು-ಶಿವಮೊಗ್ಗ, ಬೆಂಗಳೂರು-ಬಳ್ಳಾರಿ, ಬೆಂಗಳೂರು-ಬೀದರ್, ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲುಗಳ ಸಂಚಾರ ನಡೆಸಬೇಕು ಎಂದು ಬೇಡಿಕೆ ಇದೆ.

ಪ್ರಸ್ತುತ ಸಂಚಾರ ನಡೆಸುತ್ತಿರುವ ಕೆಎಸ್‌ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಇದೆ. ಈ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿ, ಪ್ರಾಯೋಗಿಕ ಸಂಚಾರವೂ ಮುಕ್ತಾಯಗೊಂಡಿದೆ. ಆದರೆ ರೈಲು ಸೇವೆ ಇನ್ನೂ ಸಹ ಆರಂಭವಾಗಿಲ್ಲ.

ಬೆಂಗಳೂರು ಯಶವಂತಪುರ ಮತ್ತು ನಾಂದೇಡ್ ಬೆಂಗಳೂರು ಸಿಟಿ ರೈಲಗಳು ಬೀದರ್ ನಗರದಿಂದ ಬೆಂಗಳೂರು ಸೌಲಭ್ಯ ಇದೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

5 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

6 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

8 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

8 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

8 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

9 hours ago